ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ದಲಿತರೊಬ್ಬರನ್ನು ಸಿಎಂ ಮಾಡಲಿ: ಗುಲಾಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ದಲಿತರೊಬ್ಬರನ್ನು ಸಿಎಂ ಮಾಡಲಿ: ಗುಲಾಂ
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಪದತ್ಯಾಗ ವಿಷಯವನ್ನು ದುರ್ಬಳಕೆ ಮಾಡುತ್ತಿರುವ ಬಿಜೆಪಿ ದಲಿತರೊಬ್ಬರನ್ನು ಸಿಎಂ ಮಾಡಲಿ ಇಲ್ಲವೇ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ ನೀಡಲಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಗುಲಾಂ ನಬಿ ಆಜಾದ್ ಸವಾಲು ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಿಎಂ ಹುದ್ದೆಯಿಂದ ಕೆಳಗಿಳಿದು, ಆ ಅವಕಾಶವನ್ನು ದಲಿತರಿಗೆ ಕಲ್ಪಿಸಿಕೊಡಲಿ ಎಂದ ಆಜಾದ್, ಇದೀಗ ಭಾರತೀಯ ಜನತಾ ಪಕ್ಷ ದಲಿತರ ಮತ ಗಳಿಸಲು ಹರಸಾಹಸ ಪಡುತ್ತಿದೆ ಎಂದು ವ್ಯಂಗ್ಯವಾಡಿದರು.

ಹಿಂದುಳಿದ ವರ್ಗದ ಜನರ ಭಾವನೆಗಳೊಂದಿಗೆ ಚಲ್ಲಾಟವಾಡುವ ಬಿಜೆಪಿ ತಾಕತ್ತಿದ್ದರೆ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ದಲಿತರೊಬ್ಬರಿಗೆ ನೀಡಲಿ ಎಂದು ಸವಾಲೆಸೆದ ಅವರು, ಕಾಂಗ್ರೆಸ್‌ನಲ್ಲಿ ದಲಿತರಿಗೆ ಸೂಕ್ತ ಸ್ಥಾನಮಾನ ದೊರೆಯುತ್ತಿದೆ. ಇದೀಗ ದಲಿತರ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
14 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಯಡಿಯೂರಪ್ಪ
ಭವಿಷ್ಯ ಕೇಳುತ್ತಿದ್ರೆ.ಮನೆಯಲ್ಲಿ ಕೂತ್ಕೋಬೇಕಾಗುತ್ತೆ: ದೇವೇಗೌಡ
ನೌಶಾದ್ ಹತ್ಯೆ ಪ್ರಕರಣ: 6 ಮಂದಿ ಬಂಧನ
ಬಡವರ ಬದುಕು ಪ್ರಕಾಶಿಸಬೇಕು: ರಾಹುಲ್
ಬೆಂ.ದ: ಮರುಚುನಾವಣೆಗೆ ಕಾಂಗ್ರೆಸ್ ಆಗ್ರಹ
ಬಂಗಾರಪ್ಪ ಅಹಂಕಾರದ ರಾಜಕಾರಣಿ: ಶಾಸಕ ಸಂಗಮೇಶ್