ಗುಲ್ಬರ್ಗಾ ಕೇಂದ್ರ ಕಾರಾಗೃಹದಿಂದ ಇಬ್ಬರು ಕೈದಿಗಳು ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮುಂಜಾನೆ ದರೋಡೆ ಹಾಗೂ ಕೊಲೆ ಪ್ರಕರಣದ ಆರೋಪಿಯಾಗಿದ್ದ ಜಾಫರ್ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಸಾಬಣ್ಣ ಅಯ್ಯಣ್ಣ ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದಾರೆ.
ಜೈಲಿನ ಗೋಡೆಯ ಸುತ್ತ ವಿದ್ಯುತ್ ತಂತಿ ಅಳವಡಿಸಲಾಗಿದ್ದರೂ ಕೂಡ, ಅದು ಕಳೆದ ಮೂರು ತಿಂಗಳಿನಿಂದ ಕೆಟ್ಟು ಹೋಗಿರುವ ಪರಿಣಾಮ ಈ ಇಬ್ಬರು ಕೈದಿಗಳು ಆ ಅವಕಾಶವನ್ನು ಬಳಸಿಕೊಂಡು ಪರಾರಿಯಾಗಿರುವುದಾಗಿ ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ.
ಜೈಲಿನಿಂದ ತಪ್ಪಿಸಿಕೊಂಡಿರುವ ಮೆಹಬೂಬ್ ಜಾಫರ್ ಹಾಗೂ ಸಾಬಣ್ಣ ಅಯ್ಯಣ್ಣ ಆರೋಪಿಗಳಿಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |