ಸಾಧುಶೆಟ್ಟಿ ಜನಾಂಗಕ್ಕೆ 5ಲಕ್ಷ ರೂ.ದೇಣಿಗೆ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಶುಕ್ರವಾರ ದೂರು ದಾಖಲಾಗಿದೆ.
ನಗರದ ಹೋಟೆಲೊಂದರಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಸಾಧುಶೆಟ್ಟಿ ತೆಲುಗುಚೆಟ್ಟಿ ಸಮಾಜದ ಅಭಿವೃದ್ಧಿ ಚಿಂತನಾ ಸಭೆಯಲ್ಲಿ ಜನಾಂಗಕ್ಕೆ ಸಚಿವರು ಹಣ ನೀಡುವುದಾಗಿ ಪ್ರಕಟಿಸಿದ್ದರು.
ಚುನಾವಣೆಯ ಸಂದರ್ಭದಲ್ಲಿ ಈ ರೀತಿಯಾಗಿ ಭರವಸೆ ನೀಡುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಗರ ಮಾದರಿ ನೀತಿ ಸಂಹಿತೆ ತಂಡ ಸಚಿವರ ವಿರುದ್ಧ ದೂರು ದಾಖಲಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಂಕಜ್ ಕುಮಾರ್ ಪಾಂಡೆ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ. |