ಭಾರತೀಯ ಜನತಾ ಪಕ್ಷ ನಮ್ಮ ಮೊದಲ ಶತ್ರು ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಪಕ್ಷದ ಪತನಕ್ಕಾಗಿ ಯಾವ ಪಕ್ಷಕ್ಕೆ ಬೇಕಾದರೂ ಬೆಂಬಲ ನೀಡಲು ಸಿದ್ದ ಎಂದು ಹೇಳಿದರು.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ರಾಜಕೀಯ ಮುಗಿಸಲು ಸಂಚು ರೂಪಿಸುತ್ತಿದ್ದವು ಎಂದು ದೂರಿದ್ದು, ಆ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಕೊನೆಗಾಣಿಸಲು ಸರ್ವಪ್ರಯತ್ನ ಮಾಡಲಾಗುವುದು ಎಂದರು.ಅಲ್ಲದೇ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಲು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಆ ನೆಲೆಯಲ್ಲಿ ಕೋಮುವಾದಿ ಪಕ್ಷವನ್ನು ಕಿತ್ತೊಗೆಯುವಲ್ಲಿ ಜೆಡಿಎಸ್ ಪಣ ತೊಡಲಿದೆ ಎಂದು ಹೇಳಿದರು. |