ವೈಯಕ್ತಿಕ ಭಿನ್ನಾಭಿಪ್ರಾಯದಿಂದ ಅಸಮಾಧಾನಗೊಂಡ ಬಿಜೆಪಿ ಶಾಸಕ ಭರಮಗೌಡ ರಾಜು ಕಾಗೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಗವಾಡ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಇಲ್ಲಿನ ಅಥಣಿ ತಾಲೂಕಿನ ಮಂಗಸೂರು ಎಂಬಲ್ಲಿ ವೈಯಕ್ತಿಕ ದ್ವೇಷದಿಂದಾಗಿ ತಾಳ್ಮೆ ಕಳೆದುಕೊಂಡ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್ ಕಾರ್ಯಕರ್ತ ಮೋಹನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಶಾಸಕ ಕಾಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಂಧಿಸುವಂತೆ ಆಗ್ರಹಿಸಿ ಠಾಣೆಗೆ ಮುತ್ತಿಗೆ ಹಾಕಿದ ಪ್ರಸಂಗವೂ ನಡೆಯಿತು.
ಗ್ರಾಮಸ್ಥರ ಒತ್ತಾಯಕ್ಕೆ ಮಣಿದ ಕಾಗವಾಡ ಪೊಲೀಸರು ಕೊನೆಗೂ ಶಾಸಕ ರಾಜು ಕಾಗೆ ವಿರುದ್ಧ ಕೊಲೆಯತ್ನ ಮೊಕದ್ದಮೆಯನ್ನು ದಾಖಲಿಸಿಕೊಂಡಿದ್ದಾರೆ. |