ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ರೆಡ್ಡಿ ಬ್ರದರ್ಸ್' ಗಣಿಗಾರಿಕೆ ಸ್ಥಗಿತಕ್ಕೆ ಕೇಂದ್ರದ ಆದೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ರೆಡ್ಡಿ ಬ್ರದರ್ಸ್' ಗಣಿಗಾರಿಕೆ ಸ್ಥಗಿತಕ್ಕೆ ಕೇಂದ್ರದ ಆದೇಶ
ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ತಾಕೀತು ಮಾಡಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು ಗಡಿ ಭಾಗಗಳನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಜ್ಯದ ಗಡಿಭಾಗದಲ್ಲಿ ಆಂಧ್ರ ಸರ್ಕಾರವು ಓಬಳಾಪುರಂ ಮೈನಿಂಗ್ ಕಂಪನಿ , ಬಳ್ಳಾರಿ ಕಬ್ಬಿಣ ಅದಿರು ಕಂಪನಿ ,ವೈ.ಮಹಾಬಲೇಶ್ವರಪ್ಪ ಅಂಡ್ ಸನ್ಸ್ ಮತ್ತು ಅನಂತಪುರ ಮೈನಿಂಗ್ ಕಾರ್ಪೊರೇಷನ್ ಕಂಪನಿಗಳ ಗುತ್ತಿಗೆಯನ್ನು ತಕ್ಷಣ ಅಮಾನತುಗೊಳಿಸಲು ಆದೇಶಿಸಲಾಗಿದೆ.

ಸಚಿವರ ಮಾಲೀಕತ್ವದ ಅಂತಾರಾಜ್ಯ ಗಡಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಬಗ್ಗೆ ಸ್ಪಷ್ಟವಾಗಿ ತಿಳಿಯಲು ಭಾರತೀಯ ಸರ್ವೇ ಇಲಾಖೆಯಿಂದ ಸಮೀಕ್ಷೆ ನಡೆಯಬೇಕಿದೆ. ಗಡಿ ಗುರುತಿಸುವ ಪ್ರಕ್ರಿಯೆ ಅಂತ್ಯ ಗೊಳ್ಳುವವರೆಗೆ ಎಲ್ಲ ಐದು ಕಂಪನಿಗಳ ಗುತ್ತಿಗೆಗಳನ್ನು ಅಮಾನತಿನಲ್ಲಿ ಇಡಬೇಕು ಎಂದು ಕೇಂದ್ರ ಅರಣ್ಯ ಇಲಾಖೆ ಹಿರಿಯ ಸಹಾಯಕ ಐಜಿಪಿ ಬಿ.ಕೆ.ಸಿಂಗ್ ಬುಧವಾರ ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.

ಆದೇಶ ಹೊರಡಿಸಿದ 15 ದಿನಗಳ ಒಳಗಾಗಿ ತಮಗೆ ಕಾರ್ಯಪಾಲನಾ ವರದಿ ನೀಡಬೇಕು. ಸರಿಯಾಗಿ ಗಡಿಯನ್ನು ಗುರುತಿಸದೇ ಗಣಿಗಾರಿಕೆಗೆ ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಬಿ.ಕೆ.ಸಿಂಗ್ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
2ನೇ ಹಂತದ ಚುನಾವಣೆ-ರಾಜ್ಯಾದ್ಯಂತ ಅಬ್ಬರದ ಪ್ರಚಾರ
ಬೆಂಗಳೂರು: ಸಂಸದೆ ತೇಜಸ್ವಿನಿ ಹಣ ದರೋಡೆ
ಗೌಡ್ರು ಹಗಲು ಕನಸು ಕಾಣುತ್ತಿದ್ದಾರೆ: ಕಾಂಗ್ರೆಸ್
ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ ಫಲಿತಾಂಶ: ದೇವೇಗೌಡ
ಹಲ್ಲೆ: ಶಾಸಕ ಕಾಗೆ ವಿರುದ್ಧ ಕೊಲೆಯತ್ನ ಮೊಕದ್ದಮೆ
ಬಳ್ಳಾರಿಯಲ್ಲಿ ನಾಲ್ವರು ಸಜೀವ ದಹನ