ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ಅಧಿಕಾರಕ್ಕೆ ಬಂದರೆ ಅಫ್ಜಲ್‌ಗೆ ಗಲ್ಲು: ಅನಂತ್ ಕುಮಾರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ಅಧಿಕಾರಕ್ಕೆ ಬಂದರೆ ಅಫ್ಜಲ್‌ಗೆ ಗಲ್ಲು: ಅನಂತ್ ಕುಮಾರ್
ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಅಫ್ಜಲ್ ಗುರುವನ್ನು ನೇಣಿಗೆ ಹಾಕಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಹೇಳಿದ್ದಾರೆ.

ಗದಗದ ಬೆಟಗೇರಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಭಯೋತ್ಪಾದನೆಯನ್ನು ಹತ್ತಿಕ್ಕಿ ದೇಶವನ್ನು ಸುಭದ್ರವಾಗಿಡಲು ಬಿಜಿಪಿ ಕಂಕಣ ಬದ್ಧವಾಗಿದೆ ಎಂದರು. ದೇಶದ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿದೇಶಿ ಮಹಿಳೆಯಾದ ಸೋನಿಯಾ ಗಾಂಧಿ ಕೈಗೊಂಬೆಯಾಗಿ ಆಡಳಿತ ನಡೆಸಿದ್ದಾರೆ. ಅವರು ದೇಶಕ್ಕೆ ನೀಡಿರುವ ಕೊಡುಗೆಯಾದರು ಏನು ಎಂದು ಪ್ರಶ್ನಿಸಿದ ಅವರು, ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ಖ್ಯಾತಿಯನ್ನು ಯುಪಿಎ ಸರ್ಕಾರ ಪಡೆದಿದೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದವನ್ನು ಮಾಡಿಕೊಂಡಿವೆ. ಬಿಜೆಪಿಯ ಜನಬಲವನ್ನು ಕಂಡು ಕಾಂಗ್ರೆಸ್ ದಿಕ್ಕೆಟ್ಟಿದೆ ಅವರಿಗೆ ಇಂಥಾ ದುಸ್ಥಿತಿ ಬರಬಾರದಿತ್ತು ಎಂದು ಅವರು ವ್ಯಂಗ್ಯವಾಡಿದರು.

ಜೆಡಿಎಸ್‌ನಲ್ಲಿ ಸಿದ್ಧರಾಮಯ್ಯ ಅವರಿಗೆ ಅನ್ಯಾಯ ಮಾಡಿದರೆ, ಕಾಂಗ್ರೆಸ್‌ನಲ್ಲಿ ಅವರನ್ನು ಒಳಗಡೆ ಇಟ್ಟುಕೊಂಡೆ ದಿನನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಭವಿಷ್ಯ ನುಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಂಬರೀಷ್ ಸರ್ವೋಚ್ಚ ನಾಯಕನಲ್ಲ: ಜಗ್ಗೇಶ್ ಕಿಡಿ
ಸರ್ಕಾರ ಉರುಳಿಸುವುದು ಜನ-ಎಚ್‌ಡಿಕೆ ಅಲ್ಲ: ಯಡಿಯೂರಪ್ಪ
ಬಿಜೆಪಿ ಪರ ಪ್ರಚಾರ ಆರೋಪ: ಉನ್ನತಾಧಿಕಾರಿ ಬಂಧನ
ಓಬಳಾಪುರಂ ಗಣಿಗಾರಿಕೆಯ ರದ್ದತಿ ಇಲ್ಲ: ಜನಾರ್ದನ ರೆಡ್ಡಿ
ಚುನಾವಣೆ ನಂತರ ಬಿಜೆಪಿ ನಾಶ: ವೀರಪ್ಪ ಮೊಯ್ಲಿ
ಯುಪಿಎನಿಂದ ಮಾತ್ರ ಸ್ಥಿರ ಸರ್ಕಾರ: ಸೋನಿಯಾ