ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಅಫ್ಜಲ್ ಗುರುವನ್ನು ನೇಣಿಗೆ ಹಾಕಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಹೇಳಿದ್ದಾರೆ.
ಗದಗದ ಬೆಟಗೇರಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಯೋತ್ಪಾದನೆಯನ್ನು ಹತ್ತಿಕ್ಕಿ ದೇಶವನ್ನು ಸುಭದ್ರವಾಗಿಡಲು ಬಿಜಿಪಿ ಕಂಕಣ ಬದ್ಧವಾಗಿದೆ ಎಂದರು. ದೇಶದ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿದೇಶಿ ಮಹಿಳೆಯಾದ ಸೋನಿಯಾ ಗಾಂಧಿ ಕೈಗೊಂಬೆಯಾಗಿ ಆಡಳಿತ ನಡೆಸಿದ್ದಾರೆ. ಅವರು ದೇಶಕ್ಕೆ ನೀಡಿರುವ ಕೊಡುಗೆಯಾದರು ಏನು ಎಂದು ಪ್ರಶ್ನಿಸಿದ ಅವರು, ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ಖ್ಯಾತಿಯನ್ನು ಯುಪಿಎ ಸರ್ಕಾರ ಪಡೆದಿದೆ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದವನ್ನು ಮಾಡಿಕೊಂಡಿವೆ. ಬಿಜೆಪಿಯ ಜನಬಲವನ್ನು ಕಂಡು ಕಾಂಗ್ರೆಸ್ ದಿಕ್ಕೆಟ್ಟಿದೆ ಅವರಿಗೆ ಇಂಥಾ ದುಸ್ಥಿತಿ ಬರಬಾರದಿತ್ತು ಎಂದು ಅವರು ವ್ಯಂಗ್ಯವಾಡಿದರು.
ಜೆಡಿಎಸ್ನಲ್ಲಿ ಸಿದ್ಧರಾಮಯ್ಯ ಅವರಿಗೆ ಅನ್ಯಾಯ ಮಾಡಿದರೆ, ಕಾಂಗ್ರೆಸ್ನಲ್ಲಿ ಅವರನ್ನು ಒಳಗಡೆ ಇಟ್ಟುಕೊಂಡೆ ದಿನನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಭವಿಷ್ಯ ನುಡಿದರು.
|