ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ದೇವೇಗೌಡರು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ಹಾಸನದಲ್ಲಿ ದೇವೇಗೌಡರು ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಆರತಿ ತಟ್ಟೆಗೆ ಸಾವಿರು ರೂಪಾಯಿಯ ನೋಟುಗಳನ್ನು ಹಾಕುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗ ದೇವೇಗೌಡರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಬೇಕೆಂದು ಬಿಜೆಪಿ ಮುಖಂಡರಾದ ರಾಜಶೇಖರ್, ಶಿವಕುಮಾರ್ ಸೋಮವಾರ ರಾಜ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ ಅವರಿಗೆ ದೂರು ಸಲ್ಲಿಸಿದ್ದಾರೆ.ಮಾಜಿ ಪ್ರಧಾನಿಗಳು ಸುಮಾರು ಆರೆಂಟು ಆರತಿ ತಟ್ಟೆಗೆ ಸಾವಿರ ರೂ.ಗಳ ನೋಟನ್ನು ಹಾಕುತ್ತಿರುವ ವೀಡಿಯೋ ದೃಶ್ಯದ ಸಿಡಿಯನ್ನು ಕೂಡ ಅವರು ಚುನಾವಣಾ ಆಯುಕ್ತರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. |