ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮೋದಿ ರಾಜೀನಾಮೆಗೆ ಯುವ ಕಾಂಗ್ರೆಸ್ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೋದಿ ರಾಜೀನಾಮೆಗೆ ಯುವ ಕಾಂಗ್ರೆಸ್ ಆಗ್ರಹ
ಗೋದ್ರಾ ಹತ್ಯಾಕಾಂಡದ ತನಿಖೆಗೆ ಸಂಬಂಧಿಸಿದಂತೆ ಸರ್ವೋಚ್ಚನ್ಯಾಯಾಲಯ ತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಮಿತಿಯ ಅಧ್ಯಕ್ಷ ಎಸ್.ಮನೋಹರ್ ಅವರ ನೇತೃತ್ವದಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಸೇರಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಗೋದ್ರಾ ಹತ್ಯಾಕಾಂಡಕ್ಕೆ ನರೇಂದ್ರಮೋದಿ ಅವರೇ ಕಾರಣರಾಗಿದ್ದಾರೆ ಎಂದು ದೂರಿದ ಪ್ರತಿಭಟನಾಕಾರರು ಮೋದಿ ಅವರ ಪ್ರತಿಕ್ರತಿ ದಹನಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಅವರು ರಾಜೀನಾಮೆ ನೀಡದಿದ್ದರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿ ಗೋದ್ರಾ ನರಮೇಧದ ನಿಷ್ಪಕ್ಷಪಾತ ತನಿಖೆ ಅನುಕೂಲ ಮಾಡಕೊಡಬೇಕೆಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗಣಿಗಾರಿಕೆ ರದ್ದತಿ ಹಿಂದೆ ಸಿಎಂ ಕೈವಾಡ: ಡಿಕೆಶಿ
ಚಪ್ಪಲಿ ಎಸೆತ-ಘಟನೆ ಹಿಂದೆ ದೇವೇಗೌಡರ ಕೈ: ಯಡಿಯೂರಪ್ಪ
ನಂದಕುಮಾರ್: ಆರೋಪ ಸಾಬೀತಾದರೆ 2ವರ್ಷ ಜೈಲು
ಯಡಿಯೂರಪ್ಪ ಮೇಲೆ ಚಪ್ಪಲಿ ತೂರುವ ಯತ್ನ!
ಹಣ ಹಂಚಿಕೆ-ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ: ದೇವೇಗೌಡ
ರೆಡ್ಡಿ ಸಹೋದರರ ರಾಜೀನಾಮೆಗೆ ಜೆಡಿಎಸ್ ಪಟ್ಟು