ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಘವೇಂದ್ರ ಸೋತರೆ ಸಿಎಂ ಸೋತಂತೆ: ಬಂಗಾರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಘವೇಂದ್ರ ಸೋತರೆ ಸಿಎಂ ಸೋತಂತೆ: ಬಂಗಾರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೋತರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋತ ಹಾಗೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಅಭ್ಯರ್ಥಿ ಎಸ್.ಬಂಗಾರಪ್ಪ ಹೇಳಿದರು.

ಲೋಕಸಭಾ ಚುನಾವಣೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಪೇಚಿಗೆ ಸಿಲುಕಲಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸೊರಬ ತಾಲೂಕಿನ ತಮ್ಮ ಹುಟ್ಟೂರಾದ ಕುಪಟೂರಿನಲ್ಲಿ ಮತ ಚಲಾಯಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಲ್ಲಿ ಚುನಾವಣೆಯ ನಂತರ ಜಾತ್ಯತೀತ ಶಕ್ತಿಗಳು ಒಂದಾಗಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರಗಳು ಒಳಒಪ್ಪಂದ ಮಾಡಿಕೊಂಡಿವೆ ಎಂಬ ಆರೋಪವನ್ನು ತಳ್ಳಿಹಾಕಿದ ಬಂಗಾರಪ್ಪ, ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಂಗಳೂರು: ಹವಾಲ ಜಾಲ-ಇಬ್ಬರ ಬಂಧನ
ಬಿಜೆಪಿಗೆ ಮತ ನೀಡಲು 'ಆಯುಷ್' ಫರ್ಮಾನು!
ಯಡಿಯೂರಪ್ಪ ಬಾಯಿ ಬಿಗಿ ಹಿಡಿದು ಮಾತಾಡಲಿ: ದೇವೇಗೌಡ
ಮಹಾತ್ಮಗಾಂಧಿ-ಬೋಸ್‌ಗೂ ನೀತಿ ಸಂಹಿತೆ ಬಿಸಿ!
ಖೋಟಾ ನೋಟು ಜಾಲ-ನಾಲ್ವರ ಬಂಧನ
ನೌಷಾದ್ ಹತ್ಯೆ-ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್