ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹರಿಹರದಲ್ಲಿ ಮಾರಾಮಾರಿ: ಜೆಡಿಎಸ್ ಮುಖಂಡ ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹರಿಹರದಲ್ಲಿ ಮಾರಾಮಾರಿ: ಜೆಡಿಎಸ್ ಮುಖಂಡ ಸಾವು
ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ ವಿಷಯದಲ್ಲಿ ದಾವಣಗೆರೆಯ ಹರಿಹರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಪರಿಣಾಮ ಜೆಡಿಎಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ದಾವಣಗೆರೆಯ ಹರಿಹರದಲ್ಲಿ ಜೆಡಿಎಸ್ ಮುಖಂಡ ವಿಜಯ್ ಕುಮಾರ್ ಕೊಂಡಜ್ಜಿ ಎಂಬವರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆದ ಸಂದರ್ಭದಲ್ಲಿ ಕೊಂಡಜ್ಜಿ ಅವರಿಗೆ ತೀವ್ರವಾದ ಹೊಡೆತ ಬಿದ್ದಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದರು.

ಕೊಂಡಜ್ಜಿ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಹರಿಹರ ಬೂದಿಮುಚ್ಚಿದ ಕೆಂಡದಂತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊಂಡಜ್ಜಿ ಹರಿಹರದ ಜೆಡಿಎಸ್ ಮುಖಂಡರಾಗಿದ್ದಾರೆ. ಜೆಡಿಎಸ್ ಮುಖಂಡ ಕೊಂಡಜ್ಜಿ ಸಾವನ್ನು ಖಂಡಿಸಿರುವ ಜೆಡಿಎಸ್ ಶುಕ್ರವಾರ ಹರಿಹರ ಬಂದ್‌ಗೆ ಕರೆ ನೀಡಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ಸಿಎಂ ಬಲಗೈಗೆ ಶಾಯಿ'-ಅಧಿಕಾರಿಗೆ ನೋಟಿಸ್
ಎಸ್‌ಎಸ್‌ಎಲ್‌ಸಿ ಫಲಿತಾಂಶ ವೆಬ್‌ದುನಿಯಾದಲ್ಲಿ
ಚಪ್ಪಲಿ ಎಸೆದಾತ ಜೆಡಿಎಸ್ ಕಾರ್ಯಕರ್ತನಲ್ಲ: ದೇವೇಗೌಡ
ರಾಘವೇಂದ್ರ ಸೋತರೆ ಸಿಎಂ ಸೋತಂತೆ: ಬಂಗಾರಪ್ಪ
ಬೆಂಗಳೂರು: ಹವಾಲ ಜಾಲ-ಇಬ್ಬರ ಬಂಧನ
ಬಿಜೆಪಿಗೆ ಮತ ನೀಡಲು 'ಆಯುಷ್' ಫರ್ಮಾನು!