ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ಬಕಪಕ್ಷಿಯಂತೆ ಕಾದು ಕುಳಿತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಸೋತರೆ ಪ್ರತಿಪಕ್ಷ ಸ್ಥಾನ ಬಿಡುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಅವರಂತೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯ ಕನಸು ನನಸಾಗದೆ ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಮುಂದುವರೆದು ತಮ್ಮಲೇ ಭಿನ್ನಾಭಿಪ್ರಾಯ ಶುರುವಾಗಲಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಹಲವು ಮತಗಟ್ಟೆಗಳಲ್ಲಿ ಏಜೆಂಟರೇ ಇರಲ್ಲಿಲ್ಲ. ಮತಗಟ್ಟೆ ಬಳಿ ಟೇಬಲ್ ಹಾಕಿಕೊಂಡು ಚೀಟಿ ಕೊಡುವವರು ಇರಲಿಲ್ಲ. ಇಂತಹ ದುಸ್ಥಿತಿ ಕಾಂಗ್ರೆಸ್ಗೆ ಬಂದೊದಗಿದೆ. ಇಂತಹ ಸ್ಥಿತಿ ಬರಬಾರದಿತ್ತು. ತಾವೆಂದೂ ಇಂಥ ಸ್ಥಿತಿ ನೋಡಿರಲ್ಲಿಲ್ಲ ಎಂದು ವ್ಯಂಗ್ಯವಾಡಿದರು.
ಶಿವಮೊಗ್ಗದಲ್ಲಿ ರಾಘವೇಂದ್ರ ಸಂಸತ್ ಸದಸ್ಯರಾಗಿ ಆಯ್ಕೆಯಾಗುವುದು ಖಚಿತ, ಇದರಲ್ಲಿ ಯಾವುದೇ ಸಂಶಯಗಳು ಉಳಿದಿಲ್ಲ; ಕೇವಲ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ ಎಂದು ಈಶ್ವರಪ್ಪ ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದಿದ್ದಾರೆ.
|