ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 18 ರಿಂದ 20 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಬೆಂಬಲಿಸಿದ್ದಾರೆ ಎಂಬ ಆಶಾಭಾವ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ಸೇತರ ಸರ್ಕಾರಗಳು ಆಡಳಿತ ನಡೆಸಿದ್ದು, ಬಿಜೆಪಿಯಷ್ಟು ಕೆಟ್ಟ ಆಡಳಿತ ನೀಡಿದ ಸರ್ಕಾರ ಮತ್ತೊಂದಿಲ್ಲ ಎಂಬುದು ಸತ್ಯ. ಚುನಾವಣೆಯಲ್ಲಿ ಅಧಿಕಾರವನ್ನು ದುರುಪಯೋಗ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಕಾರಣವಾಗಿದೆ ಎಂದು ಅವರು ದೂರಿದರು.
ಮೊದಲ ಹಂತದ ಮತದಾನವನ್ನು ಅವಲೋಕಿಸಿದರೆ ಮತದಾರರಲ್ಲಿ ಮತದಾನದ ಮೌಲ್ಯದ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. |