ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದಲ್ಲಿ ಕಾಂಗ್ರೆಸ್‌ಗೆ 20 ಸ್ಥಾನ ಖಚಿತ: ಶಿವಕುಮಾರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದಲ್ಲಿ ಕಾಂಗ್ರೆಸ್‌ಗೆ 20 ಸ್ಥಾನ ಖಚಿತ: ಶಿವಕುಮಾರ್
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 18 ರಿಂದ 20 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಬೆಂಬಲಿಸಿದ್ದಾರೆ ಎಂಬ ಆಶಾಭಾವ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ಸೇತರ ಸರ್ಕಾರಗಳು ಆಡಳಿತ ನಡೆಸಿದ್ದು, ಬಿಜೆಪಿಯಷ್ಟು ಕೆಟ್ಟ ಆಡಳಿತ ನೀಡಿದ ಸರ್ಕಾರ ಮತ್ತೊಂದಿಲ್ಲ ಎಂಬುದು ಸತ್ಯ. ಚುನಾವಣೆಯಲ್ಲಿ ಅಧಿಕಾರವನ್ನು ದುರುಪಯೋಗ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಕಾರಣವಾಗಿದೆ ಎಂದು ಅವರು ದೂರಿದರು.

ಮೊದಲ ಹಂತದ ಮತದಾನವನ್ನು ಅವಲೋಕಿಸಿದರೆ ಮತದಾರರಲ್ಲಿ ಮತದಾನದ ಮೌಲ್ಯದ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜೆಡಿಎಸ್ ಮುಖಂಡ ಕೊಂಡಜ್ಜಿ ಕೊಲೆ ಆರೋಪಿ ಸೆರೆ
ಎಸ್‌ಎಸ್‌ಎಲ್‌ಸಿ ಶೇ. 75 ಫಲಿತಾಂಶ: ಉಡುಪಿ ಪ್ರಥಮ
ಪ್ರತಿಪಕ್ಷ ಸ್ಥಾನಕ್ಕೆ ಸಿದ್ದು ಬಕಪಕ್ಷಿ: ಈಶ್ವರಪ್ಪ
ಹರಿಹರದಲ್ಲಿ ಮಾರಾಮಾರಿ: ಜೆಡಿಎಸ್ ಮುಖಂಡ ಸಾವು
'ಸಿಎಂ ಬಲಗೈಗೆ ಶಾಯಿ'-ಅಧಿಕಾರಿಗೆ ನೋಟಿಸ್
ಎಸ್‌ಎಸ್‌ಎಲ್‌ಸಿ ಫಲಿತಾಂಶ ವೆಬ್‌ದುನಿಯಾದಲ್ಲಿ