ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೊಂಡಜ್ಜಿ ಸಾವು-ರಾಜಕೀಯ ಬಣ್ಣ ಬೇಡ: ರೆಡ್ಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೊಂಡಜ್ಜಿ ಸಾವು-ರಾಜಕೀಯ ಬಣ್ಣ ಬೇಡ: ರೆಡ್ಡಿ
ಜೆಡಿಎಸ್ ಮುಖಂಡ ವಿಜಯ್ ಕುಮಾರ್ ಕೊಂಡಜ್ಜಿ ಸಾವಿನ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿವೆ ಎಂದು ಕಂದಾಯ ಸಚಿವ ಕರುಣಾಕರ ರೆಡ್ಡಿ ದೂರಿದರು.

ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷಣೆಯಿಂದಾಗಿ ಕೊಂಡಜ್ಜಿ ಅವರು ಸಾವನ್ನಪ್ಪಿರುವುದು ನಮಗೂ ನೋವಾಗಿದೆ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ಇದಕ್ಕೆ ರಾಜಕೀಯ ಬಣ್ಣ ಬಳಿದು ರಾಜ್ಯದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಲು ಪಿತೂರಿ ನಡೆಸುತ್ತಿವೆ. ಇದು ಖಂಡನಾರ್ಹ ಎಂದು ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ನಿಜ. ಆದರೆ, ಪ್ರಕರಣವನ್ನು ದೊಡ್ಡದು ಮಾಡಿ ವಿನಾಕಾರಣ ಗೊಂದಲ ಸೃಷ್ಟಿಸಬೇಡಿ ಎಂದು ಜೆಡಿಎಸ್ ಮುಖಂಡರಲ್ಲಿ ಅವರು ಮನವಿ ಮಾಡಿದರು.

ವಿಜಯ್ ಕುಮಾರ್ ತಿಂಗಳ ಹಿಂದೆಯಷ್ಟೇ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯುವಾಗ ಶಾಸಕ ಬಿ.ಪಿ.ಹರೀಶ್ ಪರಿಸ್ಥಿತಿ ತಿಳಿಗೊಳಿಸಿ, ವಾಪಸ್ ಹೋಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಬಳಿಕ ಉದ್ವೇಗಕ್ಕೆ ಒಳಗಾಗಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಧರ್ಮಸ್ಥಳ ಗಲಭೆ, ಇಂದು ಬೆಳ್ತಂಗಡಿ ಬಂದ್‌ಗೆ ಕರೆ
ರಾಜ್ಯದಲ್ಲಿ ಕಾಂಗ್ರೆಸ್‌ಗೆ 20 ಸ್ಥಾನ ಖಚಿತ: ಶಿವಕುಮಾರ್
ಜೆಡಿಎಸ್ ಮುಖಂಡ ಕೊಂಡಜ್ಜಿ ಕೊಲೆ ಆರೋಪಿ ಸೆರೆ
ಎಸ್‌ಎಸ್‌ಎಲ್‌ಸಿ ಶೇ. 75 ಫಲಿತಾಂಶ: ಉಡುಪಿ ಪ್ರಥಮ
ಪ್ರತಿಪಕ್ಷ ಸ್ಥಾನಕ್ಕೆ ಸಿದ್ದು ಬಕಪಕ್ಷಿ: ಈಶ್ವರಪ್ಪ
ಹರಿಹರದಲ್ಲಿ ಮಾರಾಮಾರಿ: ಜೆಡಿಎಸ್ ಮುಖಂಡ ಸಾವು