ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೈ ಕಡಿಯಿರಿ ಹೇಳಿಕೆ: ಕಾಗೋಡು ತಿಮ್ಮಪ್ಪಗೆ ಜಾಮೀನು ಮಂಜೂರು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೈ ಕಡಿಯಿರಿ ಹೇಳಿಕೆ: ಕಾಗೋಡು ತಿಮ್ಮಪ್ಪಗೆ ಜಾಮೀನು ಮಂಜೂರು
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ಪ್ರಚೋದನಾಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಕಾಗೋಡು ವಿರುದ್ಧ ದಾಖಲಾದ ಅರ್ಜಿಯ ವಿಚಾರಣೆ ನಡೆಸಿದ ಸಾಗರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು, ಜಾಮೀನು ಮಂಜೂರಿ ಮಾಡಿ, ಮುಂದಿನ ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದ್ದಾರೆ.

ಮಾರ್ಚ್ 29ರಂದು ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಗೋಡು ಅವರು, ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕತ್ತರಿಸಬೇಕು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು, ಅಲ್ಲದೇ ಚುನಾವಣಾ ಆಯೋಗ ಕಾಗೋಡು ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೂರು ವಾಪಸ್ ಪಡೆಯಲು ಶಾಸಕ ರಾಜು ಧರಣಿ
ಗಣಿ: ಗಡಿ ಸಮೀಕ್ಷೆಗೆ 'ಸುಪ್ರೀಂ' ಆರು ವಾರ ಗಡುವು
'ಹೇಳಿದಷ್ಟು ಬರೆದುಕೊಳ್ಳಿ': ಪತ್ರಕರ್ತರಿಗೆ ಶಾಸಕರ ತಾಕೀತು!
ಕೊಂಡಜ್ಜಿ ಸಾವು-ರಾಜಕೀಯ ಬಣ್ಣ ಬೇಡ: ರೆಡ್ಡಿ
ಧರ್ಮಸ್ಥಳ ಗಲಭೆ-ಬೆಳ್ತಂಗಡಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ರಾಜ್ಯದಲ್ಲಿ ಕಾಂಗ್ರೆಸ್‌ಗೆ 20 ಸ್ಥಾನ ಖಚಿತ: ಶಿವಕುಮಾರ್