ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆಗಸ್ಟ್‌ನೊಳಗೆ ಬಿಬಿಎಂಪಿ ಚುನಾವಣೆ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಗಸ್ಟ್‌ನೊಳಗೆ ಬಿಬಿಎಂಪಿ ಚುನಾವಣೆ: ಯಡಿಯೂರಪ್ಪ
ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್‌ ತಿಂಗಳೊಳಗೆ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಜನಸಂಖ್ಯೆ ಪ್ರಮಾಣ, ವ್ಯಾಪ್ತಿ, ವಾರ್ಡ್ ವಿಂಗಡಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇನ್ನೆರಡು ದಿನದಲ್ಲಿ ಸರ್ಕಾರ ಚರ್ಚೆ ನಡೆಸಲಿದೆ. ತದನಂತರ ಸರ್ಕಾರ ಚುನಾವಣೆ ನಡೆಸುವ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಬೆಂಗಳೂರು ಮಹಾನಗರ ಸಚಿವರು, ಶಾಸಕರುಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ಬಿಬಿಎಂಪಿಗೆ ಆಗಸ್ಟ್ ತಿಂಗಳೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಗಡುವು ನೀಡಿದೆ. ಈ ಅವಧಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ದವಿದ್ದು ವಾರ್ಡ್ ವಿಂಗಡಣೆ ಮತ್ತಿತರ ವಿಚಾರಗಳ ಬಗ್ಗೆ ಇನ್ನೆರಡು ದಿನಗಳಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೈ ಕಡಿಯಿರಿ ಹೇಳಿಕೆ: ಕಾಗೋಡು ತಿಮ್ಮಪ್ಪಗೆ ಜಾಮೀನು ಮಂಜೂರು
ದೂರು ವಾಪಸ್ ಪಡೆಯಲು ಶಾಸಕ ರಾಜು ಧರಣಿ
ಗಣಿ: ಗಡಿ ಸಮೀಕ್ಷೆಗೆ 'ಸುಪ್ರೀಂ' ಆರು ವಾರ ಗಡುವು
'ಹೇಳಿದಷ್ಟು ಬರೆದುಕೊಳ್ಳಿ': ಪತ್ರಕರ್ತರಿಗೆ ಶಾಸಕರ ತಾಕೀತು!
ಕೊಂಡಜ್ಜಿ ಸಾವು-ರಾಜಕೀಯ ಬಣ್ಣ ಬೇಡ: ರೆಡ್ಡಿ
ಧರ್ಮಸ್ಥಳ ಗಲಭೆ-ಬೆಳ್ತಂಗಡಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ