ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಚಿಕ್ಕಪೇಟೆ, ಕಾಟನ್ಪೇಟೆ, ಅವಿನ್ಯೂ ರಸ್ತೆ ಬದಿಗಳಲ್ಲಿ ನಡೆಯುತ್ತಿರುವ ಸಂಡೆ ಬಜಾರ್ ರದ್ದುಪಡಿಸಲು ಪಶ್ಚಿಮ ವಲಯ ಪೊಲೀಸರು ತೀರ್ಮಾನಿಸಿದ್ದಾರೆ.
ಪಶ್ಚಿಮವಲಯ ಡಿಸಿಪಿ ಬಿ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದು, ಮೇ 10ರಿಂದಲೇ ಈ ಸಂಡೆ ಬಜಾರ್ ರದ್ದಾಗಲಿದೆ ಎಂದು ಅವರು ಹೇಳಿದರು.
ಸಂಡೆ ಬಜಾರ್ನಿಂದಾಗಿ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಜೊತೆಗೆ ಕಳ್ಳತನ ಮಾಡಿದ ಅನೇಕ ವಸ್ತುಗಳನ್ನು ಇಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅನೇಕ ವರ್ಷಗಳಿಂದ ನಡೆಯುತ್ತಿದ್ದ ಸಂಡೆ ಬಜಾರ್ಗಳಲ್ಲಿ ಕಳ್ಳತನದ ವಸ್ತುಗಳ ಜತೆಗೆ ಕೆಲವು ನಿಗೂಢ ವಸ್ತುಗಳು ಮಾರಾಟವಾಗುತ್ತಿದ್ದು, ಆತಂಕಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಹೇಳಿದರು. |