ಅಕ್ರಮ ಗಣಿಗಾರಿಕೆ ಸಂಬಂಧ ಆರು ವಾರಗಳ ಸಮೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸಮೀಕ್ಷೆ ಕಾರ್ಯ ಮುಗಿಯುವ ತನಕ ಸಚಿವರಾದ ಜರ್ನಾದನ ರೆಡ್ಡಿ, ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ ದೇಶಪಾಂಡೆ ಒತ್ತಾಯಿಸಿದ್ದಾರೆ.
ಸಮೀಕ್ಷೆ ಕಾರ್ಯ ಪಾರದರ್ಶಕ ಹಾಗೂ ನಿಕ್ಪಕ್ಷಪಾತವಾಗಿ ನಡೆಯಬೇಕಾದರೆ ಜರ್ನಾದನ ರೆಡ್ಡಿ, ಶ್ರೀರಾಮುಲು ಹಾಗೂ ಕರುಣಾಕರ ರೆಡಿ ಅವರು ಕೂಡಲೇ ಅಧಿಕಾರದಿಂದ ಕೆಳಗಿಳಿಯಬೇಕೆಂದು ಅವರು ಆಗ್ರಹಿಸಿದ್ದಾರೆ.
ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಬೇಕು. ಹಾಗಾದರೆ ಸತ್ಯ ಏನೆಂಬುದು ಹೊರಬರಲಿಕ್ಕೆ ಸಾಧ್ಯವಾಗಲಿದೆ ಎಂದು ಅವರು ಪಕ್ಷದ ಕಚೇರಿಯಲ್ಲಿ ವಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿಲ್ಲವಾದರೆ, ಸಮೀಕ್ಷೆಗೆ ರೆಡ್ಡಿ ಸಹೋದರರು ಏಕೆ ಹೆದರಬೇಕು, ಒಂದು ವೇಳೆ ಅವರ ಪಾತ್ರ ಇದರಲ್ಲಿಲ್ಲ ಎಂಬುದು ಬಹಿರಂಗಗೊಂಡರೆ ಅವರಿಗೆ ಒಳ್ಳೆಯದಾಗಲಿದೆ ಎಂದರು. |