ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್-ಜೆಡಿಎಸ್ ಒಳಒಪ್ಪಂದ ವಿವರ ನೀಡಿ: ಬಿಜೆಪಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್-ಜೆಡಿಎಸ್ ಒಳಒಪ್ಪಂದ ವಿವರ ನೀಡಿ: ಬಿಜೆಪಿ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದವಾಗಿದ್ದು, ಇದರ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಇಬ್ಬಗೆಯ ನೀತಿಯನ್ನು ಅನುಸರಿಸಿದೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗವನ್ನು ಬೆಂಬಲಿಸಿದರೆ, ರಾಜ್ಯದಲ್ಲಿ ಕಾಂಗ್ರೆಸ್ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಭರ್ಜರಿ ವ್ಯಾಪಾರ ನಡೆಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮಂಗಳೂರಿನಲ್ಲಿ ಸಿಪಿಐ(ಎಂ) ಅಭ್ಯರ್ಥಿಗೆ ಮತ ಹಾಕಿ ಎಂದು ಬಹಿರಂಗವಾಗಿ ಭಾಷಣ ಮಾಡಿದರೆ, ಕಾಂಗ್ರೆಸ್‌ಗೆ ಮತ ನೀಡಿ ಎಂದು ನಿರ್ದೇಶನ ನೀಡುವ ಮೂಲಕ ಜೆಡಿಎಸ್ ಮೋಸದ ಪರಂಪರೆಯನ್ನು ಮುಂದುವರಿಸಿದೆ. ಒಂದೆಡೆ ಕಾಂಗ್ರೆಸ್‌ಗೆ ಬೆಂಬಲ ನೀಡುವ ಮೂಲಕ ಜೆಡಿಎಸ್ ತನ್ನ ಅಭ್ಯರ್ಥಿಗಳಿಗೆ ಮೋಸ ಮಾಡಿದರೆ ಮತ್ತೊಂದೆಡೆ ಕಾಮ್ರೇಡ್‌ಗಳು ರಾತ್ರಿ ಕಂಡ ಬಾವಿಯಲ್ಲಿ ಹಗಲೇ ಬಿದ್ದಂತಾಗಿದೆ ಎಂದು ಲೇವಡಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಕಾರ್ಯಾಧ್ಯಕ್ಷರೇ ಜೆಡಿಎಸ್‌ಗೆ ಬೆಂಬಲ ನೀಡಿದ್ದಾರೆ. ಹಾಸನದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಕೈಕೊಟ್ಟು ಜೆಡಿಎಸ್‌ಗೆ ಬೆಂಬಲ ನೀಡಿದರು. ಕೆಲವು ಕಡೆ ಪ್ರಚಾರಕ್ಕೆ ಹೋಗಲಿಲ್ಲ. ಇದು ಜೆಡಿಎಸ್-ಕಾಂಗ್ರೆಸ್ ನಡುವಿನ ಒಳ ಒಪ್ಪಂದವಲ್ಲವೇ ಎಂದು ಪ್ರಶ್ನಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮೇ 9: ವೆಬ್‌ದುನಿಯಾದಲ್ಲಿ ಪಿಯುಸಿ ಫಲಿತಾಂಶ
ಬಂಗಾರಪ್ಪ ಮರಕೋತಿ ರಾಜಕೀಯ ಮಾಡ್ತಾರೆ: ಸಂಗಮೇಶ್
ಸಚಿವರ ನಿವಾಸ ಅವ್ಯವಹಾರ: ತನಿಖೆಗೆ ಆದೇಶ
ಯಡಿಯೂರಪ್ಪ ಬಹಿರಂಗ ಚರ್ಚೆಗೆ ಬರಲಿ: ಎಚ್‌ಡಿಕೆ ಸವಾಲು
ಚುನಾವಣೆ ಬಳಿಕ ವೈದ್ಯರ ಬೇಡಿಕೆ ಈಡೇರಿಕೆ: ಸಿಎಂ
ಬೆಂಗಳೂರು: ಕೊಲೆ ಆರೋಪಿಗಳ ಬಂಧನ