ಇಂಜಿನಿಯರಿಂಗ್ ವೈದ್ಯಕೀಯ ಸೇರಿದಂತೆ ಮತ್ತಿತರ ವೃತ್ತಿ ಪರ ಕೋರ್ಸ್ಗಳ ಪ್ರವೇಶಕ್ಕೆ ಸೀಟು ಆಯ್ಕೆ ಮಾಡಿಕೊಳ್ಳಲು ಬೆಂಗಳೂರಿನಲ್ಲಿ ನಡೆಸುತ್ತಿದ್ದ ಸಂದರ್ಶನವನ್ನು ಮಂಗಳೂರು, ಗುಲ್ಬರ್ಗಾ ಹಾಗೂ ಹುಬ್ಬಳ್ಳಿಯಲ್ಲಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ ಆಯಾಯ ಭಾಗದ ವಿದ್ಯಾರ್ಥಿಗಳು ಆಯಾಯ ನಗರಗಳಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸಿ ಸೀಟ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.
ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಇಟಿ ಪರೀಕ್ಷೆಯಲ್ಲಿ ಅರ್ಹರಾದ ವಿದ್ಯಾರ್ಥಿಗಳು ಮುಂದಿನ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ನಡೆಸುವ ಕೌನ್ಸೆಲಿಂಗ್ನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬರಬೇಕಾಗಿತ್ತು. ದೂರದ ಊರುಗಳಿಂದ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಕಲ್ಬುರ್ಗಿ, ಮಂಗಳೂರು, ಹುಬ್ಬಳ್ಳಿಯಲ್ಲೂ ಕೌನ್ಸೆಲಿಂಗ್ ನಡೆಸಲಾಗುವದು ಎಂದು ತಿಳಿಸಿದರು. |