ಕನ್ನಡ ಭಾಷೆಯಲ್ಲೇ ಪ್ರಾಥಮಿಕ ಶಾಲಾ ಶಿಕ್ಷಣ ನೀಡಬೇಕು ಹಾಗೂ ಖಾಸಗಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲೀಷ್ ಭಾಷೆ ಕಲಿಸಲು ಅನುಮತಿ ನೀಡಬೇಕೆಂದು ಏ 6 ರಂದು ರಾಜ್ಯ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಇಂಗ್ಲೀಷ್ ಭಾಷೆಯಲ್ಲಿ ಬೋಧಿಸಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ ಹೊರಡಿಸಿದ್ದ ಆದೇಶದ ವಿರುದ್ಧ ಸರ್ವೋಚ್ಛನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆದರೆ ವಿಚಾರಣೆ ಮಾತ್ರ ಇದೂವರೆಗೂ ನಡೆದಿಲ್ಲ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಸಚಿವ ಕಾಗೇರಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ ಬಾರದಿದ್ದರಿಂದ ಹೈಕೋರ್ಟ್ ಆದೇಶದ ವಿರುದ್ಧ ತಡೆಯಾಜ್ಞೆ ಸಿಕ್ಕಿಲ್ಲ. ತಡೆಯಾಜ್ಞೆ ಸಿಕ್ಕಿಲ್ಲದೇ ಇರುವುದರಿಂದ ಆದೇಶ ಅನುಷ್ಠಾನ ಮಾಡದಿದ್ದರೆ ನ್ಯಾಯಾಂಗ ನಿಂದನೆ ಆಗುವುದರಿಂದ ಆ ಆದೇಶದ ವಿರುದ್ಧವೂ ತಡೆಯಾಜ್ಞೆಗೆ ಮೇಲ್ಮನವಿ ಸಲ್ಲಿಸುತ್ತಿದ್ದೇವೆ ಎಂದು ವಿವರಿಸಿದರು. |