ಹೊರಗುತ್ತಿಗೆ ಕುರಿತಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಐಟಿ ಕಂಪೆನಿಗಳಿಗೆ ನೆರವು ನೀಡುವ ಭರವಸೆ ನೀಡಿದ್ದಾರೆ.
ಸಾಫ್ಟ್ವೇರ್ ಕಂಪನಿಗಳು ಭಯಪಡಬೇಕಾದ ಅಗತ್ಯವಿಲ್ಲ, ನಿಮ್ಮೊಂದಿಗೆ ನಾವಿದ್ದೇವೆ ಯಾವುದೇ ಭಯಬೇಡ ಎಂದು ಕಂಪನಿಗಳಿಗೆ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಒಂದು ವೇಳೆ ಹೊರಗುತ್ತಿಗೆ ನೀಡದಿದ್ದರು ರಾಜ್ಯದ ಮೇಲೆ ದೊಡ್ಡ ಪರಿಣಾಮ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಾಫ್ಟ್ವೇರ್ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಇದರಿಂದಾಗುವ ಪರಿಣಾಮ ಹಾಗೂ ಮಾರ್ಗೋಪಾಯಗಳ ಕುರಿತು ಸಲಹೆ ಪಡೆಯುವುದಾಗಿ ತಿಳಿಸಿದರು.
ಇದೇ ವೇಳೆ ಜೆಡಿಎಸ್ ವಿರುದ್ಧ ಹರಿಹಾಯ್ದ ಯಡಿಯೂರಪ್ಪ, ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಚುನಾವಣೆ ಫಲಿತಾಂಶವೇ ಇದಕ್ಕೆ ಉತ್ತರ ನೀಡಲಿದೆ ಎಂದು ಹೇಳಿದರು. |