ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಐಟಿ ಕಂಪೆನಿಗಳಿಗೆ ಸಿಎಂ ನೆರವಿನ ಭರವಸೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಐಟಿ ಕಂಪೆನಿಗಳಿಗೆ ಸಿಎಂ ನೆರವಿನ ಭರವಸೆ
ಹೊರಗುತ್ತಿಗೆ ಕುರಿತಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಐಟಿ ಕಂಪೆನಿಗಳಿಗೆ ನೆರವು ನೀಡುವ ಭರವಸೆ ನೀಡಿದ್ದಾರೆ.

ಸಾಫ್ಟ್‌‌ವೇರ್ ಕಂಪನಿಗಳು ಭಯಪಡಬೇಕಾದ ಅಗತ್ಯವಿಲ್ಲ, ನಿಮ್ಮೊಂದಿಗೆ ನಾವಿದ್ದೇವೆ ಯಾವುದೇ ಭಯಬೇಡ ಎಂದು ಕಂಪನಿಗಳಿಗೆ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಒಂದು ವೇಳೆ ಹೊರಗುತ್ತಿಗೆ ನೀಡದಿದ್ದರು ರಾಜ್ಯದ ಮೇಲೆ ದೊಡ್ಡ ಪರಿಣಾಮ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಾಫ್ಟ್‌‌ವೇರ್ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಇದರಿಂದಾಗುವ ಪರಿಣಾಮ ಹಾಗೂ ಮಾರ್ಗೋಪಾಯಗಳ ಕುರಿತು ಸಲಹೆ ಪಡೆಯುವುದಾಗಿ ತಿಳಿಸಿದರು.

ಇದೇ ವೇಳೆ ಜೆಡಿಎಸ್ ವಿರುದ್ಧ ಹರಿಹಾಯ್ದ ಯಡಿಯೂರಪ್ಪ, ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಚುನಾವಣೆ ಫಲಿತಾಂಶವೇ ಇದಕ್ಕೆ ಉತ್ತರ ನೀಡಲಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಲೆಕ್ಕಪತ್ರ ವಿವಾದ: ಕೆಎಂಎಫ್ ಅಧ್ಯಕ್ಷ ರೇವಣ್ಣಗೆ ಮುಖಭಂಗ
ಇಂಗ್ಲೀಷ್ ಭಾಷೆ ವಿವಾದ: ಸುಪ್ರೀಂಗೆ ಮೇಲ್ಮನವಿ
ಸಂಪುಟದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ
ಸಿಎಂ ದಿವಾಳಿ ಸರ್ಕಾರದ ಸುಳ್ಳಿನ ಸರದಾರ: ಜೆಡಿಎಸ್
ಜಗ್ಗೇಶ್ ವಿರುದ್ಧ ಅಂಬಿ ಅಭಿಮಾನಿಗಳ ಪ್ರತಿಭಟನೆ
ಹೈಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆ: ಸಿಎಂ