ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಅರ್ಕಾವತಿ' ವಿವಾದಕ್ಕೆ ಎಚ್‌ಡಿಕೆ ಸರ್ಕಾರ ಕಾರಣ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಅರ್ಕಾವತಿ' ವಿವಾದಕ್ಕೆ ಎಚ್‌ಡಿಕೆ ಸರ್ಕಾರ ಕಾರಣ: ಸಿಎಂ
ಅರ್ಕಾವತಿ ಬಡಾವಣೆಯ ಭೂ ವಿವಾದ ಭುಗಿಲೇಳಲು ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ತಪ್ಪು ನಿರ್ಧಾರಗಳೇ ಮುಖ್ಯ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಭೂ ವಿವಾದದ ಕುರಿತು ಮಾಜಿ ಮುಖ್ಯಮಂತ್ರಿಗಳು ಈಗ ರೈತರಿಗೆ ಬೆಂಬಲ ಸೂಚಿಸಿ ಹೋರಾಟ ನಡೆಸುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಪ್ರತಿಕ್ರಿಯೆ ವ್ಯಕ್ತಪಡಿಸಿ, ಇದೀಗ ವೈಜ್ಞಾನಿಕ ರೀತಿಯಲ್ಲಿ ಭೂ ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅರ್ಕಾವತಿ ಬಡಾವಣೆಯಲ್ಲಿ ಐಎಎಸ್-ಐಪಿಎಸ್ ಅಧಿಕಾರಿಗಳ ಸಂಘಕ್ಕೆ ಭೂಮಿ ನೀಡಿರುವುದನ್ನು ವಿರೋಧಿಸಿ ಬುಧವಾರ ರೈತರು ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಲಹಂಕದ ಜಕ್ಕೂರಿನಲ್ಲಿ ನಡೆದಿತ್ತು.

ಯಲಹಂಕದ ಜಕ್ಕೂರಿನಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಂಘಕ್ಕೆ ಸರ್ಕಾರ 25ಎಕರೆ ಭೂಮಿ ನೀಡಿದೆ. ಇಂದು ಪೊಲೀಸ್ ಬಂದೋಬಸ್ತ್‌ನಲ್ಲಿ ಅಧಿಕಾರಿಗಳ ಸಂಘದಿಂದ ಭೂಮಿ ಪೂಜೆ ನಡೆಸಲು ಮುಂದಾದಾಗ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಅರ್ಕಾವತಿ ಭೂ ವಿವಾದ ಕುರಿತಂತೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಐಟಿ ಕಂಪೆನಿಗಳಿಗೆ ಸಿಎಂ ನೆರವಿನ ಭರವಸೆ
ಲೆಕ್ಕಪತ್ರ ವಿವಾದ: ಕೆಎಂಎಫ್ ಅಧ್ಯಕ್ಷ ರೇವಣ್ಣಗೆ ಮುಖಭಂಗ
ಇಂಗ್ಲೀಷ್ ಭಾಷೆ ವಿವಾದ: ಸುಪ್ರೀಂಗೆ ಮೇಲ್ಮನವಿ
ಸಂಪುಟದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ
ಸಿಎಂ ದಿವಾಳಿ ಸರ್ಕಾರದ ಸುಳ್ಳಿನ ಸರದಾರ: ಜೆಡಿಎಸ್
ಜಗ್ಗೇಶ್ ವಿರುದ್ಧ ಅಂಬಿ ಅಭಿಮಾನಿಗಳ ಪ್ರತಿಭಟನೆ