ಅಕ್ರಮವಾಗಿ ಮರಳು ಸಾಗಣಿಕೆ ಮಾಡಲು ಗಣಿ ಮಾಲೀಕರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.
ಲೋಕಾಯುಕ್ತ ಬಲೆಗೆ ಬಿದ್ದವರು ತೀರ್ಥಹಳ್ಳಿ ತಹಸೀಲ್ದಾರ್ ಕೇಶವರಾಜ್. ತೀರ್ಥಹಳ್ಳಿ ಸುತ್ತಮುತ್ತ ಮರಳು ಸಾಗಾಣೆ ನಡೆಸುವುದಕ್ಕೆ ಅನುಮತಿ ನೀಡುವ ಸಲುವಾಗಿ ತಮ್ಮ ಮನೆಯಲ್ಲಿಯೇ 10 ಸಾವಿರ ರೂ. ಪಡೆಯುತ್ತಿದ್ದಾಗ ಕೇಶವರಾಜ್ ಲೋಕಾಯುಕ್ತ ಸಬ್ ಇನ್ಸ್ಪೆಕ್ಟರ್ ಕರಿ ಬಸವಗೌಡ ನೇತೃತ್ವದ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.
ಕಳೆದ ಆರು ತಿಂಗಳ ಹಿಂದಷ್ಟೆ ಕೇಶವರಾಜ್ ತೀರ್ಥಹಳ್ಳಿಗೆ ಆಗಮಿಸಿದ್ದರು. ಈ ಹಿಂದೆ ಅವರು ಹಾವೇರಿಯಲ್ಲಿ ಸೇವೆ ಸಲ್ಲಿಸಿದ್ದರು. ಕಾಂತ್ರಾಜ್ ಭಾರತೀಯ ಸೇನಾ ಪಡೆಯಲ್ಲೂ ಕೆಲ ಕಾಲ ಸೇವೆ ಸಲ್ಲಿಸಿದ್ದರು.
ತೀರ್ಥಹಳ್ಳಿ ತಾಲೂಕಿನಲ್ಲಿ ಅಕ್ರಮ ಮರಳು ಸಾಗಣಿ ಹಲವು ವರ್ಷಗಳಿಂದ ವ್ಯಾಪಕವಾಗಿ ನಡೆಯುತ್ತಿದೆ ಎಂದು ಲೋಕಾಯುಕ್ತ ಸಬ್ ಇನ್ಸ್ಪೆಕ್ಟರ್ ಕರಿ ಬಸವಗೌಡ ಹೇಳಿದ್ದಾರೆ. |