ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡು ತಮ್ಮದೆ ಪಕ್ಷದ ಅಭ್ಯರ್ಥಿಗಳಿಗೇ ದ್ರೋಹ ಎಸಗಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.
ಗೌಡರು ರಾಷ್ಟ್ರ ಮಟ್ಟದಲ್ಲಿ ತೃತೀಯ ರಂಗದಲ್ಲಿದ್ದಾರೆ , ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಅವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆಗೆ ಸೇರಿ ತಮ್ಮ ಪಕ್ಷದ ಅಭ್ಯರ್ಥಿಗಳ ನಂಬಿಕೆಯನ್ನೇ ಬುಡಮೇಲು ಮಾಡಿದ್ದಾರೆ ಎಂದು ಅವರು ದೂರಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಪ್ರಜಾತಂತ್ರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಾಧನೆ, ಕ್ರಿಯಾಶೀಲ ಕಾರ್ಯತಂತ್ರಗಳನ್ನು ಸಹಿಸದೆ ಅವರು ಇಂತಹ ನೀತಿಗೆ ಬದ್ಧರಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು ಆಪಾದಿಸಿದರು. |