ಬೆಂಗಳೂರಿನ ಆಯಕಟ್ಟಿನಲ್ಲಿರುವ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಪರಭಾರೆ ಮಾಡದಿರಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ.
ಲೋಕಸಭೆ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸರ್ಕಾರಿ ಜಮೀನನ್ನು ಪ್ರೈಮ್ ಲ್ಯಾಂಡ್ ಎಂದು ಪರಿಗಣಿಸಿ ಇನ್ನು ಮುಂದೆ ಸರ್ಕಾರವೇ ತನ್ನ ವಶದಲ್ಲಿಟ್ಟುಕೊಳ್ಳಲು ತೀರ್ಮಾನಿಸಿದೆ ಎಂದು ಸಂಪುಟ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾಕರಂದ್ಲಾಜೆ ಅವರು ಸುದ್ದಿಗಾರರಿಗೆ ತಿಳಿಸಿದರು.
ಸರ್ಕಾರಿ ಜಮೀನನ್ನು ಕಾಯ್ದಿರಿಸಲು ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತೆಂದು ಅವರು ಹೇಳಿದರು. |