ರಾಜ್ಯ ಮುಖ್ಯಕಾರ್ಯದರ್ಶಿ ನೇತೃತ್ವದ ಆಗತ್ಯವಸ್ತುಗಳ ಬೆಲೆ ನಿಯಂತ್ರಣ ಸಮಿತಿಯು ಸದ್ಯವೇ ಸಭೆ ಸೇರಿ ಬೆಲೆ ನಿಯಂತ್ರಣದ ಕುರಿತು ಚರ್ಚಿಸಲಿದೆ ಎಂಬುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಲಪ್ಪ ಶುಕ್ರವಾರ ತಿಳಿಸಿದ್ದಾರೆ.
ಅಗತ್ಯವಸ್ತುಗಳ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಹೊಣೆ ಅಲ್ಲ, ಇದು ಜಾಗತಿಕರಣದ ಪ್ರಭಾವ ಎಂದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಬೆಲೆಏರಿಕೆ ತಡೆಯುವುದು ಅನಿವಾರ್ಯವಾಗಿರುವ ಹಿನ್ನೆಯಲ್ಲಿ, ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಮಿತಿಯ ಸಂಚಾಲಕರಾಗಿ ಆಹಾರ ಇಲಾಖೆಯ ಆಯುಕ್ತರು ಕಾರ್ಯನಿರ್ವಹಿಸಿದರೆ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೃಷಿ ಆಯುಕ್ತರು, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪ್ರಮುಖ ಇಲಾಖೆಗಳ ಅಧಿಕಾರಿಗಳು ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರತಿ ಮೂರು ತಿಂಗಳಿಗೆ ಸಭೆಸೇರಲಿರುವ ಈ ಸಮಿತಿ ಆಗತ್ಯ ವಸ್ತುಗಳ ಬೆಲೆಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಸಚಿವ ಹಾಲಪ್ಪ ತಿಳಿಸಿದರು. |