ಶಿಕ್ಷಕರ ವರ್ಗಾವಣೆಯಲ್ಲಿ ಯಾವುದೇ ಬೇರೆ ಮಾರ್ಗ ಅನುಸರಿಸುವುದಿಲ್ಲ ಪಾರದರ್ಶಕತೆಯಿಂದ ನಡೆಯುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಹಿಂದಿನ ವರ್ಷ ವರ್ಗಾವಣೆ ನಡೆಯದ ಕಾರಣ ಈ ಬಾರಿ ವರ್ಗಾವಣೆ ಬಯಸುವ ಸಂಖ್ಯೆ ಹೆಚ್ಚಾಗಿದೆ. ಕಾಯ್ದೆ ಅನ್ವಯ ಶೇ.5ರಷ್ಟು ಶಿಕ್ಷಕರ ವರ್ಗಾವಣೆಗೆ ಮಾತ್ರ ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ. ಸಚಿವರು, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಒತ್ತಡ ಹೇರಿ ವರ್ಗಾವಣೆ ಮಾಡಿಸಿಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಅನ್ಯಮಾರ್ಗ ಹಿಡಿದರೆ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಮ್ಯಾನ್ಯುಯಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವುದು ನಿಷೇಧಿಸಲಾಗಿದೆ. ಈ ರೀತಿಯ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಿದರೆ ಅವುಗಳನ್ನು ಅಸಿಂಧುವೆಂದು ಪರಿಗಣಿಸಲಾಗುವುದು ಹಾಗೂ ಅಂಥ ವರ್ಗಾವಣೆಗಳಿಗೆ ಕಾರಣರಾದ ಅಧಿಕಾರಿಗಳು ಶಿಸ್ತುಕ್ರಮಕ್ಕೆ ಒಳಗಾಗುವವರು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. |