ರಾಜ್ಯದ ಮಾಹಿತಿ ತಂತ್ರಜ್ಞಾನ ಉದ್ಯಮದ ಮೇಲೆ ದುಷ್ಪರಿಣಾಮ ಬೀರದ ರೀತಿಯಲ್ಲಿ ತೆರಿಗೆ ನೀತಿ ರೂಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಮೇಲೆ ಒತ್ತಡ ಹೇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಒತ್ತಾಯಿದ್ದಾರೆ.
ಒಬಾಮ ಪ್ರಸ್ತಾಪಿಸಿರುವ ನೀತಿಯಿಂದ ಬೆಂಗಳೂರಿನ ಐಟಿ ಉದ್ಯಮದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಹಿತಿ ಸಚಿವರು ಹೇಳಿದ್ದಾರೆ. ಅವರಿಗೆ ನೈಜ ಪರಿಸ್ಥಿತಿಯ ಅರಿವು ಇದ್ದಂತಿಲ್ಲ. ಅನಾವಶ್ಯಕವಾಗಿ ಹೇಳಿಕೆ ನೀಡುವ ಬದಲು ರಾಜ್ಯದ ಐಟಿ ಉದ್ಯಮವನ್ನು ರಕ್ಷಿಸಲು ಮುಂದಾಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರ ಅಮೆರಿಕದ ಪ್ರಸ್ತಾಪವಿತ್ತ ನೀತಿಯನ್ನು ಲಘುವಾಗಿ ಪರಿಗಣಿಸಬಾರದು. ವಿದೇಶಾಂಗ ಸಚಿವಾಲಯ ಮೂಲಕ ಸೂಕ್ತ ರಾಜಕೀಯ ಒತ್ತಡ ಹೇರಬೇಕು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ದೇಶಪಾಂಡೆ ಆತಂಕ ವ್ಯಕ್ತಪಡಿಸಿದ್ದಾರೆ.
|