ಕೋಕಾ ಕಾಯ್ದೆಯು ರಾಜ್ಯಕ್ಕೆ ಅವಶ್ಯಕತೆ ಇಲ್ಲ ಎಂದಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಈ ಕಾಯ್ದೆಯನ್ನು ಜಾರಿಗೆ ತರುವುದರಿಂದ ಅನುಕೂಲಗಳಿಗಿಂತ ಅನಾನುಕೂಲಗಳೇ ಅಧಿಕ ಎಂದು ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಕೋಕಾ ಜಾರಿಯಿಂದ ಅವ್ಯವಹಾರಗಳು ಮತ್ತು ದುರುಪಯೋಗಗಳೇ ಹೆಚ್ಚಾಗಿರುವ ಕಾರಣ ರಾಜ್ಯ ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಪಡೆಗಳಿಂದಲೇ ಭಯೋತ್ಪಾದನೆಯನ್ನು ತಡೆಯಬಹುದು ಎಂದು ನುಡಿದರು.
ಪ್ರಸಕ್ತ ಇರುವ ರಕ್ಷಣಾ ಪಡೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವುದು ಬಿಟ್ಟು ಬೇರೆ ಮಾರ್ಗ ಅನುಸರಿಸುತ್ತಿರುವುದು ಸರಿಯಲ್ಲ ಎಂದವರು ಹೇಳಿದರು. |