ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಕೈ ಬಿಡುವುದಿಲ್ಲ ಎಂದು ಲೋಕಸೋಪಯೋಗಿ ಸಚಿವ ಸಿ.ಎಂ.ಉದಾಸಿ ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚಿಸುವ ಸಾಧ್ಯತೆಗಳಿದ್ದು, ಸಾಕಷ್ಟು ಬದಲಾವಣೆ ಆಗಲಿದೆ ಎಂಬ ಊಹಾಪೋಹದ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ ನೀಡಿದ ಪ್ರತಿಕ್ರಿಯೆ ಇದು.
ಸಚಿವ ಸ್ಥಾನ ಯಾಕೆ ಹೋಗುತ್ತೆ...ಸಂಪುಟ ವಿಸ್ತರಣೆ ವೇಳೆ ನಮ್ಮನ್ನು ಕೈಬಿಡುವುದಿಲ್ಲ ಎಂದು ಸಚಿವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಶಿರಾಡಿ ಘಾಟ್ ರಸ್ತೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಚಿವ ಸ್ಥಾನ ನೀಡೋ ಮೊದಲು, ನನಗೆ ವಕ್ಫ್ ಮತ್ತು ಮಹಿಳಾ , ಮಕ್ಕಳ ಅಭಿವೃದ್ಧಿ ಖಾತೆ ಬಿಟ್ಟು ಇನ್ಯಾವುದಾದದರೂ ಕೊಡಿ ಎಂದು ಹೇಳಿದ್ದೆ. ಅದರಂತೆ ಪ್ರಮುಖ ಲೋಕೋಪಯೋಗಿ ಖಾತೆಯನ್ನು ನೀಡಲಾಗಿದೆ.
ಆ ನಿಟ್ಟಿನಲ್ಲಿ ಸಚಿವ ಸಂಪುಟದಿಂದ ನನ್ನ ಕೈ ಬಿಡಲ್ಲ. ಜಗದೀಶ್ ಶೆಟ್ಟರ್ ಅವರ ವಿಧಾನಭಾ ಅಧ್ಯಕ್ಷ ಸ್ಥಾನವನ್ನೂ ಬದಲಿಸಲ್ಲ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏನಾದರು ಬದಲಾವಣೆ ತಂದರೆ ಆ ಬಗ್ಗೆ ಏನು ಮಾಡಲು ಸಾಧ್ಯವಿಲ್ಲ ಎಂದರು. |