ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲು-ಗೆಲುವಿನ ಹೊಣೆಗಾರಿಕೆಯನ್ನು ಆಯಾ ಉಸ್ತುವಾರಿ ಸಚಿವರ ತಲೆಗೆ ಕಟ್ಟಲಾಗುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ತಿಳಿಸಿದರು.
ಎಲ್ಲಾ ಉಸ್ತುವಾರಿ ಸಚಿವರೂ ಚೆನ್ನಾಗಿ ಕೆಲಸ ಮಾಡಿದ್ದಾರೆ. ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಆದರೆ ಅಭ್ಯರ್ಥಿಯ ಸೋಲು-ಗೆಲುವಿಗೆ ಸಚಿವರನ್ನು ಹೊಣೆ ಮಾಡುವುದು ಸರಿಯಲ್ಲ. ಪಕ್ಷ ಹಾಗೆ ಮಾಡುವುದಿಲ್ಲ ಎಂದು ಹೇಳಿದರು.
ಅಭ್ಯರ್ಥಿಗಳ ಸೋಲು ಅನೇಕ ಅಂಶಗಳನ್ನು ಒಳಗೊಂಡಿರುತ್ತದೆ. ಆದ್ದರಿಂದ ಅದಕ್ಕೆ ಸಚಿವರನ್ನು ಗುರಿ ಮಾಡುವುದು ಸರಿಯಲ್ಲ ಎಂದ ಅವರು, ಚುನಾವಣಾ ಉಸ್ತುವಾರಿ ವಹಿಸಿಕೊಂಡ ಎಲ್ಲರೂ ಹೊಣೆಗಾರಿಕೆಯಿಂದ ಕೆಲಸ ಮಾಡಿದ್ದಾರೆ. ಯಾರ ಬಗ್ಗೆಯೂ ದೂರು ಬಂದಿಲ್ಲ ಎಂದರು.
ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಕೇಂದ್ರದಲ್ಲಿ ಆಡ್ವಾಣಿ ನೇತೃತ್ವದ ಎನ್ಡಿಎ ಸರ್ಕಾರ ರಚನೆಯಾಗಲಿದೆ ಎನ್ನುವ ವಿಶ್ವಾಸವನ್ನವರು ವ್ಯಕ್ತಪಡಿಸಿದರು. |