ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಫಲಿತಾಂಶ: ಸಚಿವರ ತಲೆ ದಂಡ ಇಲ್ಲ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಲಿತಾಂಶ: ಸಚಿವರ ತಲೆ ದಂಡ ಇಲ್ಲ
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲು-ಗೆಲುವಿನ ಹೊಣೆಗಾರಿಕೆಯನ್ನು ಆಯಾ ಉಸ್ತುವಾರಿ ಸಚಿವರ ತಲೆಗೆ ಕಟ್ಟಲಾಗುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ತಿಳಿಸಿದರು.

ಎಲ್ಲಾ ಉಸ್ತುವಾರಿ ಸಚಿವರೂ ಚೆನ್ನಾಗಿ ಕೆಲಸ ಮಾಡಿದ್ದಾರೆ. ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಆದರೆ ಅಭ್ಯರ್ಥಿಯ ಸೋಲು-ಗೆಲುವಿಗೆ ಸಚಿವರನ್ನು ಹೊಣೆ ಮಾಡುವುದು ಸರಿಯಲ್ಲ. ಪಕ್ಷ ಹಾಗೆ ಮಾಡುವುದಿಲ್ಲ ಎಂದು ಹೇಳಿದರು.

ಅಭ್ಯರ್ಥಿಗಳ ಸೋಲು ಅನೇಕ ಅಂಶಗಳನ್ನು ಒಳಗೊಂಡಿರುತ್ತದೆ. ಆದ್ದರಿಂದ ಅದಕ್ಕೆ ಸಚಿವರನ್ನು ಗುರಿ ಮಾಡುವುದು ಸರಿಯಲ್ಲ ಎಂದ ಅವರು, ಚುನಾವಣಾ ಉಸ್ತುವಾರಿ ವಹಿಸಿಕೊಂಡ ಎಲ್ಲರೂ ಹೊಣೆಗಾರಿಕೆಯಿಂದ ಕೆಲಸ ಮಾಡಿದ್ದಾರೆ. ಯಾರ ಬಗ್ಗೆಯೂ ದೂರು ಬಂದಿಲ್ಲ ಎಂದರು.

ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಕೇಂದ್ರದಲ್ಲಿ ಆಡ್ವಾಣಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎನ್ನುವ ವಿಶ್ವಾಸವನ್ನವರು ವ್ಯಕ್ತಪಡಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಿಎ ನಿವೇಶನ ಮಾರಾಟವಿಲ್ಲ: ಸಚಿವ ಸುರೇಶ್
ಅಂಬರೀಷ್ ಅಭಿಮಾನಿಗಳಿಂದ ಜಗ್ಗೇಶ್ ಪ್ರತಿಕೃತಿ ದಹನ
ವಿದ್ಯುತ್ ಬವಣೆ ನೀಗಿಸಲು ಶೀಘ್ರವೇ ಸಭೆ: ಈಶ್ವರಪ್ಪ
ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿಎಂ 'ವಿಶ್ರಾಂತಿ'
'ಕೋಕಾ' ಕಾಯ್ದೆ ತಿದ್ದುಪಡಿಗೆ ಡಿಕೆಶಿ ಆಕ್ರೋಶ
ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಜೆಡಿಎಸ್ ಆಗ್ರಹ