ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಾಸ್ತ್ರೀಯ ಭಾಷೆ ಕಣ್ಣೊರೆಸುವ ತಂತ್ರ: ಚಂದ್ರು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಾಸ್ತ್ರೀಯ ಭಾಷೆ ಕಣ್ಣೊರೆಸುವ ತಂತ್ರ: ಚಂದ್ರು
ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವ ಕೇಂದ್ರ ಸರ್ಕಾರದ ನಿರ್ಧಾರ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಇದರ ವಿರುದ್ಧ ಹೋರಾಟವನ್ನು ಮುಂದುವರಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೋಮವಾರ ತಿಳಿಸಿದರು.

ಕೇಂದ್ರ ಸರ್ಕಾರ ಶಾಸ್ತ್ರೀಯ ಭಾಷೆಯ ಸ್ಥಾನಮಾನದ ಆದೇಶ ಹೊರಡಿಸುವಾಗ ಚೆನ್ನೈ ಹೈಕೋರ್ಟ್‌ನ ತೀರ್ಮಾನಕ್ಕೆ ಬದ್ಧವಾಗಿ ಎಂಬ ಪದವನ್ನು ಬಳಸಿದೆ. ಇತ್ತೀಚೆಗೆ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದಲ್ಲಿ ಹೊಸದೇನೂ ಇಲ್ಲ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಕಳೆದ ಅಕ್ಟೋಬರ್ 31ರಂದು ಕೇಂದ್ರದ ಸಂಸ್ಕೃತಿ ಸಚಿವೆ ಅಂಬಿಕಾ ಸೋನಿ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡುವ ಘೋಷಣೆ ಮಾಡಿದ್ದರು. ಅದಕ್ಕೆ ಈಗ ಅಧಿಕೃತ ಒಪ್ಪಿಗೆ ನೀಡಿದ್ದಾರೆ. ಈ ಪ್ರಕರಣ ಕೋರ್ಟ್‌ನಲ್ಲಿದ್ದರೂ ಕೂಡ ಆರ್ಥಿಕ ಸೌಲಭ್ಯ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದರೆ ಅಭಿನಂದನೆ ಸಲ್ಲಿಸುತ್ತಿದ್ದೆವು ಎಂದರು.

ಕನ್ನಡ ಕೂಡ ತಮಿಳು ಭಾಷೆಯಷ್ಟೇ ಪುರಾತನವಾಗಿದೆ. ಆದ್ದರಿಂದ ಕಳೆದ 5ವರ್ಷಗಳಲ್ಲಿ ತಮಿಳು ಭಾಷೆಗೆ 750ಕೋಟಿ ರೂಪಾಯಿಷ್ಟು ಆರ್ಥಿಕ ನೆರವು ನೀಡಲಾಗಿದ್ದು, ಕನ್ನಡ ಭಾಷೆಯ ಅಭಿವೃದ್ಧಿಗೂ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯೋಜನೆಗೆ ಹಣ ಬಿಡುಗಡೆ ಮಾಡದ ಬಿಜೆಪಿ: ಖರ್ಗೆ
ಫಲಿತಾಂಶ: ಸಚಿವರ ತಲೆ ದಂಡ ಇಲ್ಲ
ಸಿಎ ನಿವೇಶನ ಮಾರಾಟವಿಲ್ಲ: ಸಚಿವ ಸುರೇಶ್
ಅಂಬರೀಷ್ ಅಭಿಮಾನಿಗಳಿಂದ ಜಗ್ಗೇಶ್ ಪ್ರತಿಕೃತಿ ದಹನ
ವಿದ್ಯುತ್ ಬವಣೆ ನೀಗಿಸಲು ಶೀಘ್ರವೇ ಸಭೆ: ಈಶ್ವರಪ್ಪ
ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿಎಂ 'ವಿಶ್ರಾಂತಿ'