ಭಾಷಾ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ಸುಪ್ರೀಂಕೋರ್ಟ್ ಬುಧವಾರ ನಕಾರ ವ್ಯಕ್ತಪಡಿಸಿದೆ. 1 ನೇ ತರಗತಿಯಿಂದಲೇ ಇಂಗ್ಲಿಷ್ ಭಾಷೆ ಕಲಿಸಬೇಕು, ಕನ್ನಡದಲ್ಲೇ ಶಿಕ್ಷಣ ನೀಡಬೇಕೆಂಬ ಹಠ ಬೇಡ ಎಂಬ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಪೀಠ, ಮಧ್ಯಂತರ ತಡೆಯಾಜ್ಞೆ ಸಾಧ್ಯವಿಲ್ಲ ಎಂದು ಆದೇಶ ನೀಡಿ, ಪ್ರತಿವಾದಿ ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಈ ಬಗ್ಗೆ ರಜೆಯ ನಂತರ ವಿಚಾರಣೆಯನ್ನು ಮುಂದುವರಿಸುವುದಾಗಿ ಸುಪ್ರೀಂಕೋರ್ಟ್ನ ರಜಾಕಾಲದ ನ್ಯಾಯಪೀಠ ತಿಳಿಸಿದೆ.ಕನ್ನಡ ಭಾಷೆಯಲ್ಲೇ ಪ್ರಾಥಮಿಕ ಶಾಲಾ ಶಿಕ್ಷಣ ನೀಡಬೇಕು ಹಾಗೂ ಖಾಸಗಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲೀಷ್ ಭಾಷೆ ಕಲಿಸಲು ಅನುಮತಿ ನೀಡಬೇಕೆಂದು ಏ 6 ರಂದು ರಾಜ್ಯ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಾಗಿ ಇತ್ತೀಚೆಗಷ್ಟೇ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದರು. |