' ಹಾರ್ಟ್ಬೀಟ್ ನಾರ್ಮಲ್' ಆಗಿಯೇ ಇದೆ. ನಾನು ಈಗಾಗಲೇ ಒಂಬತ್ತು ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದೇನೆ. ಹಾರ್ಟ್ ಬೀಟ್ ಕಾಣಿಸಿಕೊಳ್ಳುವುದು ಹೊಸಬರಿಗೆ'-ಹೀಗೆಂದು ಖಾಸಗಿ ಟಿವಿ ಚಾನೆಲ್ವೊಂದಕ್ಕೆ ಅಭಿಪ್ರಾಯ ವ್ಯಕ್ತಪಡಿಸಿದವರು ಕಾಂಗ್ರೆಸ್ ಹಿರಿಯ ಮುಖಂಡ, ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ.ಲೋಕಸಭಾ ಮತಸಮರದ ಜನಾದೇಶ ಹೊರಬೀಳಲು ಕೆಲವೇ ಗಂಟೆಗಳು ಬಾಕಿ ಇರುವ ಕುರಿತಂತೆ ತಮ್ಮ ಅಭಿಪ್ರಾಯ ಏನು ಎಂಬ ಪ್ರಶ್ನೆಗೆ ಖರ್ಗೆ ಅವರು ನೀಡಿದ ಉತ್ತರ ಇದಾಗಿದೆ.ಸರ್ಕಾರದ ವಿರುದ್ಧ ಜನರೇ ರೊಚ್ಚಿಗೆದ್ದಿದ್ದಾರೆ. ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬ ಆಶಾಭಾವ ವ್ಯಕ್ತಪಡಿಸಿದ ಅವರು, ಬೀದರ್ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿಯ ದುರಾಡಳಿತದ ಬಗ್ಗೆ ಜನರಿಗೆ ತಿಳಿದಿದೆ. ಅಧಿಕಾರ ದುರುಪಯೋಗ, ರಾಜ್ಯದಲ್ಲಿ ಗಲಭೆ ಸೇರಿದಂತೆ ಆಡಳಿತಾರೂಢ ಬಿಜೆಪಿ ಜನಪರ ಸರ್ಕಾರ ಅಲ್ಲ ಎಂಬುದು ಸ್ಪಷ್ಟ ಎಂದು ಈ ಸಂದರ್ಭದಲ್ಲಿ ಹೇಳಿದರು. |