ರಾಜ್ಯದ ಜಿಲ್ಲಾ ಪಂಚಾಯತ್ಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ರಾಜ್ಯ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಆದರೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲಾ ಪಂಚಾಯತ್ಗಳಿಗೆ ಈ ತಡೆಯಾಜ್ಞೆಯಿಂದ ವಿಮಾಯಿತಿ ನೀಡಿದೆ.ಜಿಲ್ಲಾ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ನಿಗದಿಯಾಗಿ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನ ಹಿಂದೆಯೇ ಅಧ್ಯಕ್ಷ ಉಪಾಧ್ಯಕ್ಷ ಆಕಾಂಕ್ಷಿಗಳಾಗಿದ್ದ ಅನೇಕ ಜಿಲ್ಲಾ ಪಂಚಾಯತ್ ಸದಸ್ಯರು ಅತೃಪ್ತರಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.ಮೀಸಲಾತಿ ನಿಗದಿ ಸರಿಯಾಗಿ ನಡೆದಿಲ್ಲ ಎಂದು ಆಕ್ಷೇಪಿಸಿ ಅನೇಕರು ನ್ಯಾಯಾಲಯದ ಮೊರೆ ಹೋಗಿದ್ದು, ಇಂದು ಈ ಆಕ್ಷೇಪಣೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. |