ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಖರ್ಗೆ-ಮೊಯ್ಲಿ ನಡುವೆ 'ಮಂತ್ರಿಗಿರಿ' ಪೈಪೋಟಿ ಶುರು!
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಖರ್ಗೆ-ಮೊಯ್ಲಿ ನಡುವೆ 'ಮಂತ್ರಿಗಿರಿ' ಪೈಪೋಟಿ ಶುರು!
PTI
ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಇದೀಗ ದೆಹಲಿಯಲ್ಲಿ ಸರ್ಕಾರ ರಚನೆಗಾಗಿ ಕಸರತ್ತು ನಡೆಯುತ್ತಿದ್ದರೆ, ಇತ್ತ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಧುರೀಣರಲ್ಲಿ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ.

ಸತತ ಆರು ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಸೋನಿಯಾ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಅದರ ಬೆನ್ನಲ್ಲೇ ಸೋಲಿಲ್ಲದ ಸರದಾರ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಜಯಭೇರಿ ಬಾರಿಸಿರುವ ಮಲ್ಲಿಕಾರ್ಜುನ ಖರ್ಗೆ ಕೂಡ ಭಾನುವಾರ ಮಧ್ನಾಹ್ನ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

NRB
ಅಲ್ಲದೇ ಮಾಜಿ ಮುಖ್ಯಮಂತ್ರಿ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ವಿಜಯಿಯಾಗಿರುವ ಎಂ.ವೀರಪ್ಪ ಮೊಯ್ಲಿ ಕೂಡ ದೆಹಲಿಯತ್ತ ಪ್ರಯಾಣಿಸಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಓಟದಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದರು ಕೂಡ, ಮಂತ್ರಿಗಿರಿಗಾಗಿ ಈಗಾಗಲೇ ತುರುಸಿನ ಪೈಪೋಟಿ ಆರಂಭವಾಗಿದೆ. ಆದರೆ ಸೋನಿಯಾ ಕೃಪಾಕಟಾಕ್ಷ ಯಾರ ಮೇಲೆ ಇದೆಯೋ ಎಂದು ಕಾದುನೋಡಬೇಕಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ಸೋಲಿಲ್ಲದ ಸರದಾರ ಖರ್ಗೆ' 10ನೇ ಬಾರಿಯೂ ಗೆಲುವು
3 ಶಾಸಕರು ಲೋಕಸಭೆಗೆ ಪ್ರವೇಶ
ಕಾಂಗ್ರೆಸ್ ಹೀನಾಯ ಸೋಲಿಗೆ ದೇಶಪಾಂಡೆ ನಿರಾಸೆ
ಬಿಜೆಪಿ ಗೆಲುವಿಗೆ ಸಿಎಂ ಯಡಿಯೂರಪ್ಪ ಹರ್ಷ
ಖರ್ಗೆ, ಕಟೀಲ್, ರಾಘವೇಂದ್ರ ಪ್ರಥಮ ಬಾರಿಗೆ ಸಂಸತ್ ಪ್ರವೇಶ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ