ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಅಖಾಡಕ್ಕೆ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಅಖಾಡಕ್ಕೆ?
ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಟುಂಬದ ಬದ್ಧ ವೈರಿ ತೇಜಸ್ವಿನಿ ರಮೇಶ್ ವಿರುದ್ಧ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರದಲ್ಲಿ ಮಂತ್ರಿಗಿರಿಗಾಗಿ ಪೈಪೋಟಿ ನಡೆಸುತ್ತಿದ್ದರೆ ಮತ್ತೊಂದೆಡೆ ಸಂಸದರಾಗಿ ಆಯ್ಕೆಯಾಗಿರುವುದರಿಂದ ತೆರವಾಗುತ್ತಿರುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರು ಸ್ಪರ್ಧಿಸಲಿದ್ದಾರೆ ಎಂಬು ಮಾತುಗಳು ಕೇಳಿಬರತೊಡಗಿದೆ.

ಕುಮಾರಸ್ವಾಮಿ ಸಂಸತ್‌ಗೆ ಪ್ರವೇಶ ಪಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಕ್ಷೇತ್ರದಿಂದ ಭವಾನಿ ರೇವಣ್ಣ ಅವರನ್ನೇ ಅಖಾಡಕ್ಕಿಳಿಸಲು ಜೆಡಿಎಸ್ ಮುಖಂಡರು ಸಮಾಲೋಚನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆಯಲ್ಲಿ ಪತಿ ರೇವಣ್ಣ, ಲೋಕಸಭೆ ಚುನಾವಣೆಯಲ್ಲಿ ಮಾವ ದೇವೇಗೌಡರ ಗೆಲುವಿಗೆ ಶ್ರಮಿಸಿದ ಭವಾನಿ ವಿಧಾನಸಭೆಗೆ ಪ್ರವೇಶಿಸುವ ತಯಾರಿಯಲ್ಲಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಪತ್ನಿ ಅನಿತಾಕುಮಾರಸ್ವಾಮಿ ಶಾಸಕಿಯಾಗಿದ್ದಾರೆ. ಇದೀಗ ದೇವೇಗೌಡ ಕುಟುಂಬದ ಮತ್ತೊಬ್ಬ ಸೊಸೆ ರಾಜಕೀಯ ಅಖಾಡಕ್ಕೆ ಇಳಿಯುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ಹಣ ಬಲದಿಂದ ಬಿಜೆಪಿ ಜಯ ಸಾಧಿಸಿದೆ: ಮಲ್ಲಿಕಾರ್ಜುನ ಖರ್ಗೆ
ತುಳಸಿಯಾನ ಸಂಸ್ಥೆಯಿಂದ 4ಕೋಟಿ ರೂ.ಪಂಗನಾಮ!
ಕಾಂಗ್ರೆಸ್‌‌ಗೆ ನೆರವಾಗದ 'ಜೆಡಿಎಸ್ ಸಾಥ್'
ಸಚಿವರ ತಲೆದಂಡ ಇಲ್ಲ: ಸದಾನಂದ ಗೌಡ
ಅಭಿವೃದ್ಧಿಗಾಗಿ 'ಕೈ' ಹಿಡಿಯಲು ಸಿದ್ಧ: ಕುಮಾರಸ್ವಾಮಿ