ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
NRB
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲಿ ಆಂತರಿಕ ಭಿನ್ನಮತ ತಲೆದೋರಲಿದೆ ಎಂದು ಭವಿಷ್ಯ ನುಡಿದಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಬಿಜೆಪಿ ಕತೆ ಏನಾಗಲಿದೆ ಎಂಬುದನ್ನು ಪರದೆ ಮೇಲೆ ನೋಡಿ ಆನಂದಿಸಿ ಎಂದು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲಿ ಈಗಾಗಲೇ ಕಚ್ಚಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ತೀವ್ರಗೊಂಡು ಸರಕಾರ ತನ್ನಿಂದ ತಾನೇ ಅಭದ್ರಗೊಳ್ಳಲಿದೆ ಎಂದು ಹೇಳಿದರು.

ಪ್ರತಿಪಕ್ಷಗಳು ಸರಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ದುರಾಡಳಿತದ ಮೂಲಕ ಯಡಿಯೂರಪ್ಪ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಯಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ. ಖರ್ಗೆ ಅವರಿಂದ ತೆರವಾಗಿರುವ ಸ್ಥಾನವನ್ನು ನನಗೆ ನೀಡಿದರೆ ಸರಕಾರಕ್ಕೆ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ದಪಡಿಸುವುದಾಗಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಚಿವ ಸ್ಥಾನ-ಎಚ್.ಡಿ.ಕುಮಾರಸ್ವಾಮಿ ಕನಸು ಭಗ್ನ?
ಕಾಫಿ ಬೆಳೆಗಾರರ ಪ್ಯಾಕೇಜ್‌‌ಗೆ ಆದ್ಯತೆ: ಡಿ.ಬಿ.ಚಂದ್ರೇಗೌಡ
ಚಿತ್ರಪ್ರದರ್ಶನ ಸಮಯ ಬದಲಾವಣೆ-ಕುಣಿತಕ್ಕೆ ಬ್ರೇಕ್: ಆಚಾರ್ಯ
ಹಣಬಲ ಪ್ರವೃತ್ತಿ ಪ್ರಜಾಪ್ರಭುತ್ವಕ್ಕೆ ಮಾರಕ: ಜೆಡಿಎಸ್
ಬೀದರ್ ಉಪಚುನಾವಣೆ: ಮರು ಮತಎಣಿಕೆಗೆ ಬಿಜೆಪಿ ಆಗ್ರಹ
ಜೆಡಿಎಸ್ ಮೈಮೇಲೆ ಬಿದ್ದು ಬೆಂಬಲ ಕೊಡ್ತಿದೆ: ವಿಶ್ವನಾಥ್