ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲಿ ಆಂತರಿಕ ಭಿನ್ನಮತ ತಲೆದೋರಲಿದೆ ಎಂದು ಭವಿಷ್ಯ ನುಡಿದಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಬಿಜೆಪಿ ಕತೆ ಏನಾಗಲಿದೆ ಎಂಬುದನ್ನು ಪರದೆ ಮೇಲೆ ನೋಡಿ ಆನಂದಿಸಿ ಎಂದು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲಿ ಈಗಾಗಲೇ ಕಚ್ಚಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ತೀವ್ರಗೊಂಡು ಸರಕಾರ ತನ್ನಿಂದ ತಾನೇ ಅಭದ್ರಗೊಳ್ಳಲಿದೆ ಎಂದು ಹೇಳಿದರು.ಪ್ರತಿಪಕ್ಷಗಳು ಸರಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ದುರಾಡಳಿತದ ಮೂಲಕ ಯಡಿಯೂರಪ್ಪ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.ಯಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ. ಖರ್ಗೆ ಅವರಿಂದ ತೆರವಾಗಿರುವ ಸ್ಥಾನವನ್ನು ನನಗೆ ನೀಡಿದರೆ ಸರಕಾರಕ್ಕೆ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ದಪಡಿಸುವುದಾಗಿ ಹೇಳಿದರು. |