ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅತಿ ಆತ್ಮವಿಶ್ವಾಸವೇ ಸೋಲಿಗೆ ಕಾರಣ: ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅತಿ ಆತ್ಮವಿಶ್ವಾಸವೇ ಸೋಲಿಗೆ ಕಾರಣ: ಸಿದ್ದರಾಮಯ್ಯ
ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಅತಿಯಾದ ಆತ್ಮವಿಶ್ವಾಸ, ಪ್ರಚಾರದ ಕೊರತೆ ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ವಿಳಂಬವೇ ಮುಖ್ಯ ಕಾರಣ ಎಂದು ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋನಿಯಾ ಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಕಾರಣವಲ್ಲ ಎಂದರು.

ಕೇಂದ್ರದಲ್ಲಿ ಯುಪಿಎ ಮತ್ತೆ ಸರ್ಕಾರ ರಚನೆ ಮಾಡುತ್ತಿದೆ. ಆದರೆ ರಾಜ್ಯದಲ್ಲಿ ಮಾತ್ರ ನಿರೀಕ್ಷೆಯ ಮಟ್ಟದಲ್ಲಿ ಸ್ಥಾನಗಳು ಬಂದಿಲ್ಲ. ಇದಕ್ಕೆ ಕಾರಣ ಏನೆಂಬುದನ್ನು ನಾಯಕರೆಲ್ಲರು ಕುಳಿತು ಚರ್ಚಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌‌ನಲ್ಲಿ ನಾಯಕರ ಮಧ್ಯೆ ಇರುವ ಭಿನ್ನಾಭಿಪ್ರಾಯವೇ ಸೋಲಿಗೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿದೆ ಇದು ಸರಿ ಅಲ್ಲ. ಬಿಜೆಪಿ ಸರ್ಕಾರದ ವೈಫಲ್ಯದ ಬಗ್ಗೆ ಜನರಿಗೆ ಮುಟ್ಟಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಆದ್ದರಿಂದಲೇ ಹೆಚ್ಚು ಸ್ಥಾನ ಗಳಿಸಲು ಕಾಂಗ್ರೆಸ್‌‌ಗೆ ಸಾಧ್ಯವಾಗಿಲ್ಲ. ಯಡಿಯೂರಪ್ಪ ಸುಳ್ಳು ಹೇಳುವುದರಲ್ಲಿ ಬಾರಿ ಚಾಣಾಕ್ಷರು. ಸುಳ್ಳು ಹೇಳಿಯೇ ಜನರನ್ನು ದಾರಿ ತಪ್ಪಿಸಿದ್ದಾರೆ ಎಂದು ದೂರಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚಿತ್ರದುರ್ಗ: ಎತ್ತಿನಗಾಡಿ ಹಳ್ಳಕ್ಕೆ ಬಿದ್ದು 19ಸಾವು
ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿ: ಕರವೇ
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಸಚಿವ ಸ್ಥಾನ-ಎಚ್.ಡಿ.ಕುಮಾರಸ್ವಾಮಿ ಕನಸು ಭಗ್ನ?
ಕಾಫಿ ಬೆಳೆಗಾರರ ಪ್ಯಾಕೇಜ್‌‌ಗೆ ಆದ್ಯತೆ: ಡಿ.ಬಿ.ಚಂದ್ರೇಗೌಡ
ಚಿತ್ರಪ್ರದರ್ಶನ ಸಮಯ ಬದಲಾವಣೆ-ಕುಣಿತಕ್ಕೆ ಬ್ರೇಕ್: ಆಚಾರ್ಯ