ರಾಜ್ಯದಲ್ಲಿರುವ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ಯಾರಿಂದಲೂ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಬಿಜೆಪಿ ಸರ್ಕಾರಕ್ಕೆ 120 ಶಾಸಕರ ಬಲವಿದ್ದು, ಸದೃಢವಾಗಿದೆ. ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸರ್ಕಾರ ಉರುಳಿಸುವ ಯತ್ನ ನಡೆಯದು ಎಂದು ಹೇಳಿದರು. ಈಗಾಗಲೇ ಸಾಕಷ್ಟು ರಾಜಕೀಯವಾಗಿ ನಾಟಕ ನಡೆಸಿದರೂ ಕೂಡ ಅದ್ಯಾವುದೂ ಪ್ರಯೋಜನಕ್ಕೆ ಬಾರಲಿಲ್ಲ ಎಂದು ಲೇವಡಿ ಮಾಡಿದರು.ಲೋಕಸಭೆಗೆ ಬಿಜೆಪಿಯಿಂದ ಆಯ್ಕೆಯಾದ ನೂತನ ಸದಸ್ಯರು ಹಾಗೂ ಶಾಸಕರ ಸಭೆಯಲ್ಲಿ ಭಾಗವಹಿಸುವುದಕ್ಕೆ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಯಡಿಯೂರಪ್ಪನವರು ಉತ್ತರಿಸಿದರು. ಮುಂದಿನ ದಿನಗಳಲ್ಲಿ ಸರ್ಕಾರವನ್ನು ಮತ್ತಷ್ಟು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು. |