ಕೇಂದ್ರದಲ್ಲಿ ಯುಪಿಎ ಸರ್ಕಾರ ರಚನೆ ಮಾಡುವ ಸಚಿವ ಸಂಪುಟದಲ್ಲಿ ಜೆಡಿಎಸ್ಗೆ ಸ್ಥಾನ ಲಭಿಸುವುದು ಕಷ್ಟಸಾಧ್ಯ ಎಂದು ಸ್ಪಷ್ಟವಾಗಿ ಗೋಚರಿಸಿದ ನಂತರ ಜೆಡಿಎಸ್ ತನ್ನ ಪಕ್ಷವನ್ನು ಸಂಘಟನೆ ಮಾಡಲು ಮುಂದಾಗಿದೆ.
ಪಕ್ಷದ ಮೊದಲ ಹೆಜ್ಜೆಯಾಗಿ ತನ್ನ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಿ, ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಿದೆ. ಜೆಡಿಎಸ್ ಇದೇ ಮೊದಲ ಬಾರಿಗೆ ಬ್ಲಾಕ್ ಮಟ್ಟದ ಪದಾಧಿಕಾರಿಗಳಿಂದ ಹಿಡಿದು ರಾಜ್ಯ ಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸುವುದಾಗಿ ಹೇಳಿದೆ.
ವಿಧಾನ ಸಭೆಯಲ್ಲಿ ತೆರವಾಗಿರುವ ಐದು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಕುಮಾರಸ್ವಾಮಿರವರು ದೆಹಲಿಯಿಂದ ಹಿಂತಿರುಗಿದ ನಂತರ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. |