ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಂಗಳೂರು: ಮುಸ್ಲಿಂ ಯುವಕರ ಮೇಲೆ ಹಲ್ಲೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಂಗಳೂರು: ಮುಸ್ಲಿಂ ಯುವಕರ ಮೇಲೆ ಹಲ್ಲೆ
ನಗರದ ಹೊರವಲಯದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಮುಸ್ಲಿಂ ಯುವಕರಿಬ್ಬರ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡಿರುವ ಯುವಕರಿಬ್ಬರೂ, ಹಿಂದೂ ಸಂಘಟನೆಗಳಿಗೆ ಸೇರಿದ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಿತು ಎಂದು ಆರೋಪಿಸಿದ್ದರು.

ಮಾರ್ನಮಿಕಟ್ಟೆಯ ನಿವಾಸಿ ಮೊಹಮ್ಮದ್ ಅಶ್ರಫ್(27) ಹಾಗೂ ಅಡ್ಯಾರ್ ಪದವಿನ ಫಾರೂಕ್(22) ಹಲ್ಲೆಯಲ್ಲಿ ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ 11.30ರ ಸುಮಾರಿಗೆ 10-12ಮಂದಿ ಗುಂಪು ಮರಕಾಯುಧಗಳಿಂದ ಅಶ್ರಫ್ ಮೇಲೆ ಹಲ್ಲೆ ನಡೆಸಿದ್ದು, ಅವರ ಮುಖ, ಕತ್ತು ಹಾಗೂ ಬೆನ್ನಿನ ಮೇಲೆ ಗಾಯಗಳಾಗಿವೆ. ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅಶ್ರಫ್ ಮೇಲಿನ ಹಲ್ಲೆ ಘಟನೆಗೆ ಸಂಬಂಧಿಸಿ ನಗರದ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಮತ್ತೊಂದು ಘಟನೆಯಲ್ಲಿ ಅಡ್ಯಾರ್ ಪದವು ನಿವಾಸಿ ರಿಕ್ಷಾ ಚಾಲಕ ಫಾರೂಕ್ ಮೇಲೆ ನಾಲ್ವರ ತಂಡ ಹಲ್ಲೆ ನಡೆಸಿದೆ. ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಣ್ಣು ಅಲಿಯಾಸ್ ಪ್ರದೀಪ್(25)ಎಂಬಾತನನ್ನು ಬಂಧಿಸಿದ್ದಾರೆ.

ಹಾಲು ತರಲು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದಾಗ ಹಿಂದಿನಿಂದ ಆಗಮಿಸಿದ ಅಣ್ಣು ಎಂಬಾತನಿದ್ದ ಗುಂಪು ಏಕಾಏಕಿ ಅವರ ಮೇಲೆ ಆಯುಧದಿಂದ ಹಲ್ಲೆ ನಡೆಸಿ ಪರಾರಿಯಾಗಿತ್ತು ಎಂದು ಫಾರೂಕ್ ದೂರು ನೀಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪತ್ನಿ ಪೀಡಕ ಪತಿ ಈಗ ಪೊಲೀಸರ ಅತಿಥಿ!
ಕಾವೇರಿ ಮಳಿಗೆಯಲ್ಲಿ ಮತ್ತೆ ಬೆಂಕಿ-ಕೋಟ್ಯಂತರ ರೂ.ಹಾನಿ
ಫಲಿಸದ ತಂತ್ರ-ಪಕ್ಷ ಸಂಘಟನೆಯತ್ತ ಜೆಡಿಎಸ್
ಬಿಜೆಪಿಯಿಂದ ಯತ್ನಾಳ್‌ಗೆ 'ಗೇಟ್‌ಪಾಸ್‌‌'
ತಾಯಾಣೆಗೂ ಬಿಜೆಪಿಗೆ ದ್ರೋಹ ಬಗೆದಿಲ್ಲ: ಕೃಷ್ಣಯ್ಯ ಶೆಟ್ಟಿ
ಆಂಗ್ಲ ಮಾಧ್ಯಮಕ್ಕೆ ಅನುಮತಿ ಕೋರಿ ಹೈಕೋರ್ಟ್ ಮೊರೆ