ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಡಿಕೆಶಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಡಿಕೆಶಿ
NRB
ಲೋಕಸಭಾ ಚುನಾವಣೆಯಲ್ಲಿ ಹಣ-ಹೆಂಡ ಹಂಚಿರುವ ಬಗ್ಗೆ ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ತಮ್ಮ ಪಕ್ಷದ ವಿರುದ್ಧವೇ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಹಿರಿಯ ಮುಖಂಡ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಅಕ್ರಮಗಳ ಬಗೆಗೆ ಪ್ರದೇಶ ಕಾಂಗ್ರೆಸ್ ಅನೇಕ ಬಾರಿ ಆಯೋಗಕ್ಕೆ ದೂರು ನೀಡಿತ್ತು. ಆ ಸಂದರ್ಭದಲ್ಲಿ ಅವೆಲ್ಲವೂ ಸುಳ್ಳು ಎನ್ನುವ ಹಾಗೆ ಬಿಜೆಪಿಯವರು ಅಲ್ಲಗಳೆಯುತ್ತಿದ್ದರು. ಆದರೆ ಇವತ್ತು ಆ ಪಕ್ಷದ ಸಚಿವರೇ ಅಕ್ರಮ ನಡೆದಿರುವ ಸತ್ಯ ಒಪ್ಪಿಕೊಂಡಿರುವ ಪರಿಣಾಮ ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಈಶ್ವರಪ್ಪ ಅವರ ಹೇಳಿಕೆ ಕುರಿತು ಆಯೋಗಕ್ಕೂ ಮಾಹಿತಿ ನೀಡುತ್ತೇವೆ. ಹಾಗೆಯೇ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನೂ ಭೇಟಿಯಾಗಿ ದೂರು ನೀಡಲಾಗುವುದು ಎಂದರು.

ಚುನಾವಣೆ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ,ಸಾವಿರಾರು ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ದೂರುಗಳು ಕೂಡ ದಾಖಲಾಗಿದೆ. ಇಷ್ಟೆಲ್ಲ ಪುರಾವೆಗಳಿದ್ದ ಮೇಲೆ ಮತ್ತೊಮ್ಮೆ ತನಿಖೆ ನಡೆಸುವ ಅಗತ್ಯ ಏನಿದೆ ಎಂದು ಡಿಕೆಶಿ ಪ್ರಶ್ನಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣ-ಹೆಂಡ ಹಂಚಿಕೆ ಆರೋಪ: ಈಶ್ವರಪ್ಪಗೆ ನೋಟಿಸ್
ಬಿಜೆಪಿ ಹಣ-ಹೆಂಡ ಹಂಚಿಕೆ ಬಗ್ಗೆ ತನಿಖೆಯಾಗಲಿ: ಉಗ್ರಪ್ಪ
4928 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ: ಕಾಗೇರಿ
ಶಾಸಕರಿಗೆ ಯಡಿಯೂರಪ್ಪ ಕಿಮ್ಮತ್ತು ನೀಡುತ್ತಿಲ್ಲ: ರೆಡ್ಡಿ
ಹಾಲಪ್ಪ ರಾಜೀನಾಮೆ ನೀಡಬೇಕು: ಬೇಳೂರು
ರಾಷ್ಟ್ರಪತಿ ಪದಕ: ಗೌಪ್ಯ ವರದಿ ತಿರುಚಿದ ಲೋಕಾಯುಕ್ತ!
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com