ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಲೋಕಾಯುಕ್ತ ನ್ಯಾ.ಹೆಗ್ಡೆ ವಿರುದ್ಧ ಮಾನನಷ್ಟ ದಾವೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲೋಕಾಯುಕ್ತ ನ್ಯಾ.ಹೆಗ್ಡೆ ವಿರುದ್ಧ ಮಾನನಷ್ಟ ದಾವೆ
NRB
ಬಾಲಕ ಅಭಿಷೇಕ್ ಮೋರಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಗ್ಗೆ ಮಾನಹಾನಿಕಾರಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಅವರು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಖಾಸಗಿ ಟಿವಿ ವಾಹಿನಿಯಲ್ಲಿ ಮಾತನಾಡಿದ ಲೋಕಾಯುಕ್ತ ನ್ಯಾ.ಹೆಗ್ಡೆಯವರು ತನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ದೂರಿ ನಗರದ 5ನೇ ಎಸಿಎಂಎಂ ಕೋರ್ಟ್‌ನಲ್ಲಿ ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಅವರು ಶನಿವಾರ ಮಾನನಷ್ಟ ದಾವೆ ದಾಖಲಿಸಿದ್ದಾರೆ.

ಕಳೆದ ಭಾನುವಾರ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಲಿಂಗರಾಜಪುರದ ಬಾಲಕ ಅಭಿಷೇಕ್ ಮೋರಿ ನೀರಿನಲ್ಲಿ ಕೊಚ್ಚಿ ಹೋಗಿದ್ದ, ಈ ಸಂದರ್ಭದಲ್ಲಿ ಬಿಬಿಎಂಪಿ, ಅಗ್ನಿಶಾಮಕ ದಳ ಬಾಲಕನ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದರೂ ಕೂಡ ಈವರೆಗೂ ಬಾಲಕನ ಮೃತದೇಹ ಪತ್ತೆಯಾಗಿಲ್ಲವಾಗಿತ್ತು.

ಘಟನೆಯ ನಂತರ ಸ್ವ ಇಚ್ಛೆಯಿಂದ ಬಾಲಕ ಅಭಿಷೇಕ್ ಕುಟುಂಬಕ್ಕೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬಳಿಕ ಖಾಸಗಿ ಟಿವಿ ವಾಹಿನಿಯೊಂದರ ಸಂದರ್ಶನದಲ್ಲಿ, ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಅವರು ಮೃತಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವಷ್ಟು ಸೌಜನ್ಯ ಇಲ್ಲ, ಇದು ಅಮಾನವೀಯ ವರ್ತನೆ. ಅಲ್ಲದೇ ಜನರ ಕಷ್ಟಗಳಿಗೆ ಸ್ಪಂದಿಸಲು ಆಗದಿದ್ದ ಮೇಲೆ ಬಿಬಿಎಂಪಿ ಯಾಕೆ ಎಂದು ಹರಿಹಾಯ್ದಿದ್ದರು.

ನ್ಯಾ.ಸಂತೋಷ್ ಹೆಗ್ಡೆಯವರು ಬಹಿರಂಗವಾಗಿ ಆರೋಪ ಮಾಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಬಂದಂತಾಗಿದೆ. ನಾನು ಕಳೆದ ಕೆಲವು ವರ್ಷಗಳಿಂದ ಬಿಬಿಎಂಪಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. ಆ ಕಾರಣಕ್ಕಾಗಿ ತಾನು ಲೋಕಾಯುಕ್ತ ನ್ಯಾಯಮೂರ್ತಿಗಳ ವಿರುದ್ಧ ದಾವೆ ಹೂಡಿರುವುದಾಗಿ ಆಯುಕ್ತರು ಸಮರ್ಥನೆ ನೀಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ಉಸ್ತುವಾರಿ ಸಚಿವಗಿರಿಯಿಂದ ಮುಕ್ತಿಗೊಳಿಸಿ': ಶೋಭಾ
ಭಿನ್ನಮತ ಇಲ್ಲ;ಇದೆಲ್ಲಾ ಮಾಧ್ಯಮಗಳ ಸೃಷ್ಟಿ: ರೆಡ್ಡಿ
ಮಂಗಳೂರು: ಐವರು ಸಾಮೂಹಿಕ ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ನಮ್ಮ ವೈರಿಯಲ್ಲ: ಎಚ್.ಡಿ.ರೇವಣ್ಣ
'ನನಗೆ ಸರ್ಕಾರಿ ಮನೆ,ಹೊಸ ಕಾರು ಕೊಡಿ': ಉಗ್ರಪ್ಪ
ರೇವಣ್ಣ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ